ಸುಳ್ಯ: ಸಂಪಾಜೆ ಸೇರಿದಂತೆ ಘಾಟಿ ಪ್ರದೇಶದಲ್ಲಿ ಹಾಗೂ ಸುಳ್ಯ, ಸಂಪಾಜೆ, ಅರಂತೋಡು ಪರಿಸರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ಅರಂಬೂರು ಪ್ರದೇಶದಲ್ಲಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.
ಸಂಪಾಜೆ ಪ್ರದೇಶದಿಂದ ಮುಂದಿನ ಘಾಟಿ ಪ್ರದೇಶದಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಕಳೆದ ಬಾರಿಯ ಜಲಪ್ರಳಯದ ಸಂದರ್ಭ ಕೊಚ್ಚಿ ಹೋದ ಮಣ್ಣು ಈಗಲೂ ನೀರಿನೊಂದಿಗೆ ಮಿಶ್ರವಾಗಿ ಬರುತ್ತಿದೆ. ಮಂಗಳೂರು ಮಡಿಕೇರಿ ರಸ್ತೆಯ ಮದೆನಾಡು ಪ್ರದೇಶದಿಂದ ಆರಂಭವಾಗಿ ಜೋಡುಪಾಲ ಹಾಗೂ ಅದಕ್ಕಿಂತಲೂ ಕಳಗಿನ ಭಾಗದಿಂದಲೇ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಹೀಗಾಗಿ ಪಯಸ್ವಿನಿ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಇದೇ ರೀತಿ ನೀರು ಹರಿದರೆ ಸುಳ್ಯ ಮಡಿಕೇರಿ ರಸ್ತೆ ಮುಳುಗಿ ಸಂಚಾರ ಸ್ಥಗಿತವಾಗಬಹುದು ಎಂದು ಸ್ಥಳೀಯರು ಹೇಳುತ್ತಾರೆ.
ಜೋಡುಪಾಲ ಬಳಿ ಹರಿದು ಬರುತ್ತಿರುವ ನೀರು…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…