ಸಂಪಾಜೆ: ಸಂಪಾಜೆ ವಲಯ ಮಟ್ಟದ ದೈವಾರಾಧಕರ ಹಾಗೂ ಪರಿಚಾರಕ ವರ್ಗದ ಸಭೆಯು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಕ್ಷಯ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಸಭೆಯಲ್ಲಿ ಸಂಪಾಜೆ, ಅರಂತೋಡು ಹಾಗೂ ತೊಡಿಕಾನ ಗ್ರಾಮಗಳ ಸುಮಾರು 50ಕ್ಕೂ ಮಿಕ್ಕಿ ದೈವಾರಾಧಕ ಸಮಿತಿಯ ಸದಸ್ಯರು, ಮತ್ತು ಸಂಪಾಜೆ ವಲಯ ಮಟ್ಟದ ವ್ಯಾಪ್ತಿಯ ಪರಿಚಾರಕ ವರ್ಗದವರು ಹಾಜರಿದ್ದರು. ಸಭೆಯಲ್ಲಿ ಪ್ರಮುಖವಾಗಿ ಭೂತಾರಾಧನೆ, ಕೋಲದ ಸಮಯದಲ್ಲಿ ಹಾಗೂ ಇತರ ಶುಭ ಸಮಾರಂಭಗಳಲ್ಲಿ ಪರಿಚಾರಕ ವರ್ಗದವರ ಸಂಭಾವನೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ವೇದಿಕೆಯಲ್ಲಿ ದೈವಾರಾಧಕರ ಸಮಿತಿ ಗೌರವಾಧ್ಯಕ್ಷರಾದ ಪಿ.ಬಿ.ದಿವಾಕರ ರೈ, ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಹಾಗೂ ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ ಉಪಸ್ಥಿತರಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…