ಸಂಪಾಜೆ: ಸಂಪಾಜೆ ವಲಯ ಮಟ್ಟದ ದೈವಾರಾಧಕರ ಹಾಗೂ ಪರಿಚಾರಕ ವರ್ಗದ ಸಭೆಯು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಕ್ಷಯ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಸಭೆಯಲ್ಲಿ ಸಂಪಾಜೆ, ಅರಂತೋಡು ಹಾಗೂ ತೊಡಿಕಾನ ಗ್ರಾಮಗಳ ಸುಮಾರು 50ಕ್ಕೂ ಮಿಕ್ಕಿ ದೈವಾರಾಧಕ ಸಮಿತಿಯ ಸದಸ್ಯರು, ಮತ್ತು ಸಂಪಾಜೆ ವಲಯ ಮಟ್ಟದ ವ್ಯಾಪ್ತಿಯ ಪರಿಚಾರಕ ವರ್ಗದವರು ಹಾಜರಿದ್ದರು. ಸಭೆಯಲ್ಲಿ ಪ್ರಮುಖವಾಗಿ ಭೂತಾರಾಧನೆ, ಕೋಲದ ಸಮಯದಲ್ಲಿ ಹಾಗೂ ಇತರ ಶುಭ ಸಮಾರಂಭಗಳಲ್ಲಿ ಪರಿಚಾರಕ ವರ್ಗದವರ ಸಂಭಾವನೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ವೇದಿಕೆಯಲ್ಲಿ ದೈವಾರಾಧಕರ ಸಮಿತಿ ಗೌರವಾಧ್ಯಕ್ಷರಾದ ಪಿ.ಬಿ.ದಿವಾಕರ ರೈ, ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಹಾಗೂ ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…