ಗುತ್ತಿಗಾರು : ಮಡಿಕೇರಿ ಅರಣ್ಯ ವಿಭಾಗದ ವ್ಯಾಪ್ತಿಯ ಸಂಪಾಜೆ ಉಪ ವಲಯಾರಣ್ಯಾಧಿಕಾರಿ ಪ್ರದೇಶದ ಸಂಪಾಜೆಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 5 ಲಕ್ಷ ಮೌಲ್ಯದ ಹರಳುಕಲ್ಲನ್ನು ಸಂಪಾಜೆ ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬ್ದುಲ್ ಕುಂಙಿ ಅಲಿಯಾಸ್ ಅಂದಾಯ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಸುಮಾರು 103 ಕೆ.ಜಿಯಷ್ಟು ಅಕ್ರಮ ಹರಳುಕಲ್ಲು ದಾಸ್ತಾನಿ ಇರಿಸಲಾಗಿತ್ತು. ಖಚಿತ ಮಾಹಿತಿಯನ್ನು ಕಲೆಹಾಕಿದ ಅರಣ್ಯ ಅಧಿಕಾರಿಗಳ ತಂಡ ಶುಕ್ರವಾರ ಸಂಜೆ ದಾಳಿ ನಡೆಸಿ ಕಲ್ಲನ್ನು ವಶಪಡಿಸಿಕೊಂಡಿದೆ. ಈ ವೇಳೆ ಆರೋಪಿ ಅಬ್ದುಲ್ ಕುಂಙಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಾಗಿ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾರ್ಗದರ್ಶನದಲ್ಲಿ ಸಂಪಾಜೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿತೀಶ್ ನೇತೃತ್ವದ ತಂಡ ದಾಳಿ ನಡೆಸಿತ್ತು.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…