ಗುತ್ತಿಗಾರು : ಮಡಿಕೇರಿ ಅರಣ್ಯ ವಿಭಾಗದ ವ್ಯಾಪ್ತಿಯ ಸಂಪಾಜೆ ಉಪ ವಲಯಾರಣ್ಯಾಧಿಕಾರಿ ಪ್ರದೇಶದ ಸಂಪಾಜೆಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 5 ಲಕ್ಷ ಮೌಲ್ಯದ ಹರಳುಕಲ್ಲನ್ನು ಸಂಪಾಜೆ ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬ್ದುಲ್ ಕುಂಙಿ ಅಲಿಯಾಸ್ ಅಂದಾಯ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಸುಮಾರು 103 ಕೆ.ಜಿಯಷ್ಟು ಅಕ್ರಮ ಹರಳುಕಲ್ಲು ದಾಸ್ತಾನಿ ಇರಿಸಲಾಗಿತ್ತು. ಖಚಿತ ಮಾಹಿತಿಯನ್ನು ಕಲೆಹಾಕಿದ ಅರಣ್ಯ ಅಧಿಕಾರಿಗಳ ತಂಡ ಶುಕ್ರವಾರ ಸಂಜೆ ದಾಳಿ ನಡೆಸಿ ಕಲ್ಲನ್ನು ವಶಪಡಿಸಿಕೊಂಡಿದೆ. ಈ ವೇಳೆ ಆರೋಪಿ ಅಬ್ದುಲ್ ಕುಂಙಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಾಗಿ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾರ್ಗದರ್ಶನದಲ್ಲಿ ಸಂಪಾಜೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿತೀಶ್ ನೇತೃತ್ವದ ತಂಡ ದಾಳಿ ನಡೆಸಿತ್ತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…