ಗುತ್ತಿಗಾರು : ಮಡಿಕೇರಿ ಅರಣ್ಯ ವಿಭಾಗದ ವ್ಯಾಪ್ತಿಯ ಸಂಪಾಜೆ ಉಪ ವಲಯಾರಣ್ಯಾಧಿಕಾರಿ ಪ್ರದೇಶದ ಸಂಪಾಜೆಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 5 ಲಕ್ಷ ಮೌಲ್ಯದ ಹರಳುಕಲ್ಲನ್ನು ಸಂಪಾಜೆ ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬ್ದುಲ್ ಕುಂಙಿ ಅಲಿಯಾಸ್ ಅಂದಾಯ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಸುಮಾರು 103 ಕೆ.ಜಿಯಷ್ಟು ಅಕ್ರಮ ಹರಳುಕಲ್ಲು ದಾಸ್ತಾನಿ ಇರಿಸಲಾಗಿತ್ತು. ಖಚಿತ ಮಾಹಿತಿಯನ್ನು ಕಲೆಹಾಕಿದ ಅರಣ್ಯ ಅಧಿಕಾರಿಗಳ ತಂಡ ಶುಕ್ರವಾರ ಸಂಜೆ ದಾಳಿ ನಡೆಸಿ ಕಲ್ಲನ್ನು ವಶಪಡಿಸಿಕೊಂಡಿದೆ. ಈ ವೇಳೆ ಆರೋಪಿ ಅಬ್ದುಲ್ ಕುಂಙಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಾಗಿ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾರ್ಗದರ್ಶನದಲ್ಲಿ ಸಂಪಾಜೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿತೀಶ್ ನೇತೃತ್ವದ ತಂಡ ದಾಳಿ ನಡೆಸಿತ್ತು.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…