Advertisement
ಸುದ್ದಿಗಳು

ಸಂಪುಟ ವಿಸ್ತರಣೆಗೆ ಸಜ್ಜಾದ ಬಿ ಎಸ್ ವೈ : ಸುಳ್ಯಕ್ಕೆ ಇದೆಯೇ ಸಚಿವ ಸ್ಥಾನ…?

Share

ಬೆಂಗಳೂರು: ಉಪಚುನಾವಣೆಯ ಫಲಿತಾಂಶದ ಬಳಿಕ ಹಲವು ಅಡೆ ತಡೆಗಳ ನಂತರ ಇದೀಗ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. ಈ ಬಗ್ಗೆ ಚರ್ಚೆದ ನಡೆಸಲೆ  ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ. ಇಂದು ರಾತ್ರಿ 9 ಗಂಟೆಗೆ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿರುವ  ಬಿ ಎಸ್ ವೈ ಅವರು ನಂತರ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ. ರಾಷ್ಟ್ರೀಯ ಮುಖಂಡರು ಈಗಾಗಲೇ ಮಾಡಿಕೊಂಡಿರುವ ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ನೀಡಿದರೆ ಮುಂದಿನ ವಾರವೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆಯ ವೇಳೆ ಉಪಚುನಾವಣೆಯಲ್ಲಿ  ಗೆದ್ದಿರುವ ಬಹುತೇಕ ಶಾಸಕರಿಗೆ ಸಚಿವ ಸ್ಥಾನ ಸಿಗಲಿದ್ದು ಪಕ್ಷದ ಹಿತದೃಷ್ಟಿಯಿಂದ ಹಾಗೂ ಮೂಲ ಬಿಜೆಪಿಗರಿಗೆ ನ್ಯಾಯ ನೀಡಲು ಈಗ ಇರುವ ಕೆಲವು ಸಚಿವರನ್ನು   ಕೈಬಿಟ್ಟು ಹೊಸಬರನ್ನು ತೆಗೆದುಕೊಳ್ಳುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿದ್ದು ಈಗಿನ ಪಟ್ಟಿಯ ಪ್ರಕಾರ ಉಪಚುನಾವಣೆಯಲ್ಲಿ ಗೆದ್ದಿರುವ 10 ಮಂದಿ ಹಾಗೂ ಹಲವು ಬಾರಿ ಗೆದ್ದಿರುವ ಮೂಲ ಬಿಜೆಪಿಯ 4 ರಿಂದ 5 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಈ ಪಟ್ಟಿಯಲ್ಲಿ ಸುಳ್ಯದ ಶಾಸಕ ಎಸ್.ಅಂಗಾರ ಅವರ ಹೆಸರೂ ಸದ್ಯ ಇದ್ದು, ತೀರಾ ಒತ್ತಡ ಬಂದರೆ ಬದಲಾವಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.  ದಕ್ಷಿಣ ಕನ್ನಡದ ಕೋಟಾ ಹಾಗೂ ಹಲವು ಬಾರಿ ಶಾಸಕರಾಗಿರುವ ಕಾರಣಕ್ಕೆ  ಸುಳ್ಯಕ್ಕೆ ಸ್ಥಾನಮಾನ ನೀಡುವ ಆಧಾರದಲ್ಲಿ ಸದ್ಯ ಪಟ್ಟಿಯಲ್ಲಿ ಹೆಸರಿದೆ ಎಂದು ಮೂಲಗಳು ತಿಳಿಸಿವೆ.  ಈ ಬಾರಿ ಬೆಂಗಳೂರಿನಲ್ಲಿ  ಪಟ್ಟಿ ಅಂತಿಮಗೊಂಡರು ರಾಷ್ಟ್ರೀಯ ನಾಯಕರು ಈ ಪಟ್ಟಿ ವೀಕ್ಷಣೆ ಮಾಡಿ ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳನ್ನೂ ಗಮನದಲ್ಲಿರಿಸಿ ಸಚಿವ ಸ್ಥಾನ ಸಿಗಲಿದೆ. ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನಗಳನ್ನೂ ಎದುರಿಸಲು ಈ ಬಾರಿ ಪಕ್ಷದ ನಾಯಕರು ಸಿದ್ಧವಾಗಿದ್ದು, ಎಲ್ಲೂ ಪಕ್ಷ ಸಂಘಟನೆಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ  ದೆಹಲಿಗೆ ತೆರಳಿರುವ ಬಿ ಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ದೆಹಲಿಯಿಂದ ಬಂದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ. ವರಿಷ್ಟರು ಒಪ್ಪಿದರೆ ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು  ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

7 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

9 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

10 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago