ಸಂಶೋಧನಾತ್ಮಕ ಕಲಿಕೆಯಿಂದ ನೈಜ ಜ್ಞಾನಾಭಿವೃದ್ಧಿ- ಡಾ. ಪ್ರಭಾಕರ ಶಿಶಿಲ

February 20, 2020
7:37 PM

ಸುಳ್ಯ: ಭಾರತೀಯರು ಸಂಶೋಧನೆಗೆ ಹೆಚ್ಚು ಮಹತ್ವ ನೀಡುವುದಿಲ್ಲ. ಇದರಿಂದಾಗಿ ವಿಶ್ವ ಸಂಶೋಧನಾ ವೇದಿಕೆಯಲ್ಲಿ ದೇಶ ಬಹಳ ಹಿಂದುಳಿದಿದೆ. ಸಂಶೋಧನೆಯು ಕಲಿಕೆಗೆ ಭದ್ರ ತಳಪಾಯ ಒದಗಿಸುತ್ತದೆ. ಆದುದರಿಂದ ಜ್ಞಾನ ಗಳಿಕೆಗೆ ಸಂಶೋಧನಾತ್ಮಕ ಕಲಿಕೆಗಿಂತ ಉತ್ತಮವಾದ ಮಾರ್ಗ ಇನ್ನೊಂದಿಲ್ಲ ಎಂದು ಸಾಹಿತಿ ನಿವೃತ್ತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು. ಅವರು ನೆಹರೂ ಮೆಮೋರಿಯಲ್ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಏರ್ಪಡಿಸಿದ ಸಂಶೋಧನಾತ್ಮಕ ಕಲಿಕೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು.

ನಾವು ಮಂಡನೆ ಮಾಡುವ ಯಾವುದೇ ವಿಚಾರಕ್ಕೆ ಸಂಶೋಧನೆಯ ಆಧಾರವಿದ್ದರೆ ಮಾತ್ರ ಅದನ್ನು ವಿದ್ವಾಂಸರು ಒಪ್ಪಿಕೊಳ್ಳುತ್ತಾರೆ. ಸಂಶೋಧನಾ ಆಧಾರವಿಲ್ಲದ ಕಾರಣ ರಾಜಕಾರಣಿಗಳ ಬಹುತೇಕ ಹೇಳಿಕೆಗಳು ಅಪಹಾಸ್ಯಕ್ಕೆ ತುತ್ತಾಗುತ್ತವೆ. ಪ್ರೌಢ ಶಿಕ್ಷಣ ಹಂತದಲ್ಲೇ ವಿದ್ಯಾರ್ಥಿಗಳಿಗೆ ಸಂಶೋಧನೆಯ ಮೂಲ ಪಾಠಗಳನ್ನು ಹೇಳಿಕೊಟ್ಟು ಅವರನ್ನು ಕಲಿಕಾ ಕುತೂಹಲಿಗಳನ್ನಾಗಿ ಮಾಡಿದರೆ ಮುಂದಿನದು ಜ್ಞಾನವಂತರ ಪೀಳಿಗೆಯಾಗುತ್ತದೆ ಎಂದು ಅವರು ಹೇಳಿದರು.

ವಾಣಿಜ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥೆ ಪ್ರೊ.ರಮ್ಯಾ ಎಸ್.ಕೆ ಮರ್ಕಂಜ ಸಭಾಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅರ್ಪಿತಾ ಸ್ವಾಗತಿಸಿ, ಉಪನ್ಯಾಸಕಿ ಆಶಾ ಸುರೇಶ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ನಾಯಕ ಕಾರ್ತಿಕ್ ಕೃಷ್ಣ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror