Advertisement
ಸುದ್ದಿಗಳು

ಸಂಶೋಧನಾತ್ಮಕ ಕಲಿಕೆಯಿಂದ ನೈಜ ಜ್ಞಾನಾಭಿವೃದ್ಧಿ- ಡಾ. ಪ್ರಭಾಕರ ಶಿಶಿಲ

Share

ಸುಳ್ಯ: ಭಾರತೀಯರು ಸಂಶೋಧನೆಗೆ ಹೆಚ್ಚು ಮಹತ್ವ ನೀಡುವುದಿಲ್ಲ. ಇದರಿಂದಾಗಿ ವಿಶ್ವ ಸಂಶೋಧನಾ ವೇದಿಕೆಯಲ್ಲಿ ದೇಶ ಬಹಳ ಹಿಂದುಳಿದಿದೆ. ಸಂಶೋಧನೆಯು ಕಲಿಕೆಗೆ ಭದ್ರ ತಳಪಾಯ ಒದಗಿಸುತ್ತದೆ. ಆದುದರಿಂದ ಜ್ಞಾನ ಗಳಿಕೆಗೆ ಸಂಶೋಧನಾತ್ಮಕ ಕಲಿಕೆಗಿಂತ ಉತ್ತಮವಾದ ಮಾರ್ಗ ಇನ್ನೊಂದಿಲ್ಲ ಎಂದು ಸಾಹಿತಿ ನಿವೃತ್ತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು. ಅವರು ನೆಹರೂ ಮೆಮೋರಿಯಲ್ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಏರ್ಪಡಿಸಿದ ಸಂಶೋಧನಾತ್ಮಕ ಕಲಿಕೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು.

ನಾವು ಮಂಡನೆ ಮಾಡುವ ಯಾವುದೇ ವಿಚಾರಕ್ಕೆ ಸಂಶೋಧನೆಯ ಆಧಾರವಿದ್ದರೆ ಮಾತ್ರ ಅದನ್ನು ವಿದ್ವಾಂಸರು ಒಪ್ಪಿಕೊಳ್ಳುತ್ತಾರೆ. ಸಂಶೋಧನಾ ಆಧಾರವಿಲ್ಲದ ಕಾರಣ ರಾಜಕಾರಣಿಗಳ ಬಹುತೇಕ ಹೇಳಿಕೆಗಳು ಅಪಹಾಸ್ಯಕ್ಕೆ ತುತ್ತಾಗುತ್ತವೆ. ಪ್ರೌಢ ಶಿಕ್ಷಣ ಹಂತದಲ್ಲೇ ವಿದ್ಯಾರ್ಥಿಗಳಿಗೆ ಸಂಶೋಧನೆಯ ಮೂಲ ಪಾಠಗಳನ್ನು ಹೇಳಿಕೊಟ್ಟು ಅವರನ್ನು ಕಲಿಕಾ ಕುತೂಹಲಿಗಳನ್ನಾಗಿ ಮಾಡಿದರೆ ಮುಂದಿನದು ಜ್ಞಾನವಂತರ ಪೀಳಿಗೆಯಾಗುತ್ತದೆ ಎಂದು ಅವರು ಹೇಳಿದರು.

ವಾಣಿಜ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥೆ ಪ್ರೊ.ರಮ್ಯಾ ಎಸ್.ಕೆ ಮರ್ಕಂಜ ಸಭಾಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅರ್ಪಿತಾ ಸ್ವಾಗತಿಸಿ, ಉಪನ್ಯಾಸಕಿ ಆಶಾ ಸುರೇಶ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ನಾಯಕ ಕಾರ್ತಿಕ್ ಕೃಷ್ಣ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

23 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago