Advertisement
ಸುದ್ದಿಗಳು

ಸಂಶೋಧನಾತ್ಮಕ ಕಲಿಕೆಯಿಂದ ನೈಜ ಜ್ಞಾನಾಭಿವೃದ್ಧಿ- ಡಾ. ಪ್ರಭಾಕರ ಶಿಶಿಲ

Share

ಸುಳ್ಯ: ಭಾರತೀಯರು ಸಂಶೋಧನೆಗೆ ಹೆಚ್ಚು ಮಹತ್ವ ನೀಡುವುದಿಲ್ಲ. ಇದರಿಂದಾಗಿ ವಿಶ್ವ ಸಂಶೋಧನಾ ವೇದಿಕೆಯಲ್ಲಿ ದೇಶ ಬಹಳ ಹಿಂದುಳಿದಿದೆ. ಸಂಶೋಧನೆಯು ಕಲಿಕೆಗೆ ಭದ್ರ ತಳಪಾಯ ಒದಗಿಸುತ್ತದೆ. ಆದುದರಿಂದ ಜ್ಞಾನ ಗಳಿಕೆಗೆ ಸಂಶೋಧನಾತ್ಮಕ ಕಲಿಕೆಗಿಂತ ಉತ್ತಮವಾದ ಮಾರ್ಗ ಇನ್ನೊಂದಿಲ್ಲ ಎಂದು ಸಾಹಿತಿ ನಿವೃತ್ತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು. ಅವರು ನೆಹರೂ ಮೆಮೋರಿಯಲ್ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಏರ್ಪಡಿಸಿದ ಸಂಶೋಧನಾತ್ಮಕ ಕಲಿಕೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು.

ನಾವು ಮಂಡನೆ ಮಾಡುವ ಯಾವುದೇ ವಿಚಾರಕ್ಕೆ ಸಂಶೋಧನೆಯ ಆಧಾರವಿದ್ದರೆ ಮಾತ್ರ ಅದನ್ನು ವಿದ್ವಾಂಸರು ಒಪ್ಪಿಕೊಳ್ಳುತ್ತಾರೆ. ಸಂಶೋಧನಾ ಆಧಾರವಿಲ್ಲದ ಕಾರಣ ರಾಜಕಾರಣಿಗಳ ಬಹುತೇಕ ಹೇಳಿಕೆಗಳು ಅಪಹಾಸ್ಯಕ್ಕೆ ತುತ್ತಾಗುತ್ತವೆ. ಪ್ರೌಢ ಶಿಕ್ಷಣ ಹಂತದಲ್ಲೇ ವಿದ್ಯಾರ್ಥಿಗಳಿಗೆ ಸಂಶೋಧನೆಯ ಮೂಲ ಪಾಠಗಳನ್ನು ಹೇಳಿಕೊಟ್ಟು ಅವರನ್ನು ಕಲಿಕಾ ಕುತೂಹಲಿಗಳನ್ನಾಗಿ ಮಾಡಿದರೆ ಮುಂದಿನದು ಜ್ಞಾನವಂತರ ಪೀಳಿಗೆಯಾಗುತ್ತದೆ ಎಂದು ಅವರು ಹೇಳಿದರು.

ವಾಣಿಜ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥೆ ಪ್ರೊ.ರಮ್ಯಾ ಎಸ್.ಕೆ ಮರ್ಕಂಜ ಸಭಾಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅರ್ಪಿತಾ ಸ್ವಾಗತಿಸಿ, ಉಪನ್ಯಾಸಕಿ ಆಶಾ ಸುರೇಶ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ನಾಯಕ ಕಾರ್ತಿಕ್ ಕೃಷ್ಣ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

7 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

7 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

1 day ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago