ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.
ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…