ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.
ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…