ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.
ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…