ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.
ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…