ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.
ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…