ಸುಳ್ಯ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೇ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣದ ಕುರಿತು ಪ್ರಸ್ತಾಪಿಸದೇ ಇರುವುದಕ್ಕೆ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಕ್ರಿಯಾ ಸಮಿತಿ ನಿರಾಸೆ ವ್ಯಕ್ತಪಡಿಸಿದೆ.
ಸುಳ್ಯದ ಜನತೆ ಬಲು ನಿರೀಕ್ಷೆಯಿಂದ ಕಾಯುತ್ತಿರುವ ಕನಸಿನ ಯೋಜನೆಯ ಕುರಿತು ಸಂಸದರ ಬೇಡಿಕೆಯಲ್ಲಿ ಒಂದು ವಾಕ್ಯವನ್ನೂ ಉಲ್ಲೇಖ ಮಾಡದೇ ಇದ್ದುದು ತೀವ್ರ ನಿರಾಸೆ ತಂದಿದೆ ಎಂದು ಕಾಞಂಗಾಡ್-ಕಾಣಿಯೂರು ರೈಲ್ವೇ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಹೇಳಿದ್ದಾರೆ. ಈ ಹಿಂದೆ ಸಂಸದರ ನೇತೃತ್ವದಲ್ಲಿಯೇ ಕ್ರಿಯಾ ಸಮಿತಿಯು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಆದರೆ ಈಗ ಹೊಸ ಸರಕಾರದ ನೂತನ ರೈಲ್ವೇ ಸಚಿವರಿಗೆ ಜಿಲ್ಲೆಯ ರೈಲ್ವೇ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವಾಗ ಸಂಸದರು ಕಾಞಂಗಾಡ್-ಕಾಣಿಯೂರು ಹಳಿಯ ಬಗ್ಗೆ ಮರೆತರೇ ಎಂದು ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.
ಮನವಿಯಲ್ಲಿ ಈ ಯೋಜನೆಯ ಪ್ರಸ್ತಾಪವನ್ನು ಬಿಟ್ಟಿರುವ ಬಗ್ಗೆ ಸಂಸದರ ಗಮನಕ್ಕೆ ತರಲಾಗುವುದು. ಅಲ್ಲದೆ ಈ ವಿಷಯವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಗಮನಕ್ಕೆ ತರಲಾಗಿದ್ದು ಅದಕ್ಕೆ ಅವರು ತ್ವರಿತವಾಗಿ ಸ್ಪಂದಿಸಿದ್ದಾರೆ ಮತ್ತು ಕೇಂದ್ರ ರೈಲ್ವೇ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುಧಾಕರ ರೈ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490