ಸುಳ್ಯ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೇ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣದ ಕುರಿತು ಪ್ರಸ್ತಾಪಿಸದೇ ಇರುವುದಕ್ಕೆ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಕ್ರಿಯಾ ಸಮಿತಿ ನಿರಾಸೆ ವ್ಯಕ್ತಪಡಿಸಿದೆ.
ಸುಳ್ಯದ ಜನತೆ ಬಲು ನಿರೀಕ್ಷೆಯಿಂದ ಕಾಯುತ್ತಿರುವ ಕನಸಿನ ಯೋಜನೆಯ ಕುರಿತು ಸಂಸದರ ಬೇಡಿಕೆಯಲ್ಲಿ ಒಂದು ವಾಕ್ಯವನ್ನೂ ಉಲ್ಲೇಖ ಮಾಡದೇ ಇದ್ದುದು ತೀವ್ರ ನಿರಾಸೆ ತಂದಿದೆ ಎಂದು ಕಾಞಂಗಾಡ್-ಕಾಣಿಯೂರು ರೈಲ್ವೇ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಹೇಳಿದ್ದಾರೆ. ಈ ಹಿಂದೆ ಸಂಸದರ ನೇತೃತ್ವದಲ್ಲಿಯೇ ಕ್ರಿಯಾ ಸಮಿತಿಯು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಆದರೆ ಈಗ ಹೊಸ ಸರಕಾರದ ನೂತನ ರೈಲ್ವೇ ಸಚಿವರಿಗೆ ಜಿಲ್ಲೆಯ ರೈಲ್ವೇ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವಾಗ ಸಂಸದರು ಕಾಞಂಗಾಡ್-ಕಾಣಿಯೂರು ಹಳಿಯ ಬಗ್ಗೆ ಮರೆತರೇ ಎಂದು ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.
ಮನವಿಯಲ್ಲಿ ಈ ಯೋಜನೆಯ ಪ್ರಸ್ತಾಪವನ್ನು ಬಿಟ್ಟಿರುವ ಬಗ್ಗೆ ಸಂಸದರ ಗಮನಕ್ಕೆ ತರಲಾಗುವುದು. ಅಲ್ಲದೆ ಈ ವಿಷಯವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಗಮನಕ್ಕೆ ತರಲಾಗಿದ್ದು ಅದಕ್ಕೆ ಅವರು ತ್ವರಿತವಾಗಿ ಸ್ಪಂದಿಸಿದ್ದಾರೆ ಮತ್ತು ಕೇಂದ್ರ ರೈಲ್ವೇ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುಧಾಕರ ರೈ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…