Advertisement
ಸುದ್ದಿಗಳು

ಸಂಸದರ ಬೇಡಿಕೆಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿಯ ಪ್ರಸ್ತಾಪವಿಲ್ಲ : ನಿರಾಸೆ ವ್ಯಕ್ತಪಡಿಸಿದ ಕ್ರಿಯಾ ಸಮಿತಿ

Share

ಸುಳ್ಯ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೇ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣದ ಕುರಿತು ಪ್ರಸ್ತಾಪಿಸದೇ ಇರುವುದಕ್ಕೆ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಕ್ರಿಯಾ ಸಮಿತಿ ನಿರಾಸೆ ವ್ಯಕ್ತಪಡಿಸಿದೆ.

ಸುಳ್ಯದ ಜನತೆ ಬಲು ನಿರೀಕ್ಷೆಯಿಂದ ಕಾಯುತ್ತಿರುವ ಕನಸಿನ ಯೋಜನೆಯ ಕುರಿತು ಸಂಸದರ ಬೇಡಿಕೆಯಲ್ಲಿ ಒಂದು ವಾಕ್ಯವನ್ನೂ ಉಲ್ಲೇಖ ಮಾಡದೇ ಇದ್ದುದು ತೀವ್ರ ನಿರಾಸೆ ತಂದಿದೆ ಎಂದು ಕಾಞಂಗಾಡ್-ಕಾಣಿಯೂರು ರೈಲ್ವೇ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಹೇಳಿದ್ದಾರೆ. ಈ ಹಿಂದೆ ಸಂಸದರ ನೇತೃತ್ವದಲ್ಲಿಯೇ ಕ್ರಿಯಾ ಸಮಿತಿಯು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಆದರೆ ಈಗ ಹೊಸ ಸರಕಾರದ ನೂತನ ರೈಲ್ವೇ ಸಚಿವರಿಗೆ ಜಿಲ್ಲೆಯ ರೈಲ್ವೇ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವಾಗ ಸಂಸದರು ಕಾಞಂಗಾಡ್-ಕಾಣಿಯೂರು ಹಳಿಯ ಬಗ್ಗೆ ಮರೆತರೇ ಎಂದು ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.

ಮನವಿಯಲ್ಲಿ ಈ ಯೋಜನೆಯ ಪ್ರಸ್ತಾಪವನ್ನು ಬಿಟ್ಟಿರುವ ಬಗ್ಗೆ ಸಂಸದರ ಗಮನಕ್ಕೆ ತರಲಾಗುವುದು. ಅಲ್ಲದೆ ಈ ವಿಷಯವನ್ನು ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡರ ಗಮನಕ್ಕೆ ತರಲಾಗಿದ್ದು ಅದಕ್ಕೆ ಅವರು ತ್ವರಿತವಾಗಿ ಸ್ಪಂದಿಸಿದ್ದಾರೆ ಮತ್ತು ಕೇಂದ್ರ ರೈಲ್ವೇ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುಧಾಕರ ರೈ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago