ಸುಳ್ಯ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೇ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣದ ಕುರಿತು ಪ್ರಸ್ತಾಪಿಸದೇ ಇರುವುದಕ್ಕೆ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಕ್ರಿಯಾ ಸಮಿತಿ ನಿರಾಸೆ ವ್ಯಕ್ತಪಡಿಸಿದೆ.
ಸುಳ್ಯದ ಜನತೆ ಬಲು ನಿರೀಕ್ಷೆಯಿಂದ ಕಾಯುತ್ತಿರುವ ಕನಸಿನ ಯೋಜನೆಯ ಕುರಿತು ಸಂಸದರ ಬೇಡಿಕೆಯಲ್ಲಿ ಒಂದು ವಾಕ್ಯವನ್ನೂ ಉಲ್ಲೇಖ ಮಾಡದೇ ಇದ್ದುದು ತೀವ್ರ ನಿರಾಸೆ ತಂದಿದೆ ಎಂದು ಕಾಞಂಗಾಡ್-ಕಾಣಿಯೂರು ರೈಲ್ವೇ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಹೇಳಿದ್ದಾರೆ. ಈ ಹಿಂದೆ ಸಂಸದರ ನೇತೃತ್ವದಲ್ಲಿಯೇ ಕ್ರಿಯಾ ಸಮಿತಿಯು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಆದರೆ ಈಗ ಹೊಸ ಸರಕಾರದ ನೂತನ ರೈಲ್ವೇ ಸಚಿವರಿಗೆ ಜಿಲ್ಲೆಯ ರೈಲ್ವೇ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವಾಗ ಸಂಸದರು ಕಾಞಂಗಾಡ್-ಕಾಣಿಯೂರು ಹಳಿಯ ಬಗ್ಗೆ ಮರೆತರೇ ಎಂದು ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.
ಮನವಿಯಲ್ಲಿ ಈ ಯೋಜನೆಯ ಪ್ರಸ್ತಾಪವನ್ನು ಬಿಟ್ಟಿರುವ ಬಗ್ಗೆ ಸಂಸದರ ಗಮನಕ್ಕೆ ತರಲಾಗುವುದು. ಅಲ್ಲದೆ ಈ ವಿಷಯವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಗಮನಕ್ಕೆ ತರಲಾಗಿದ್ದು ಅದಕ್ಕೆ ಅವರು ತ್ವರಿತವಾಗಿ ಸ್ಪಂದಿಸಿದ್ದಾರೆ ಮತ್ತು ಕೇಂದ್ರ ರೈಲ್ವೇ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುಧಾಕರ ರೈ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…