ಸಂಸ್ಕಾರಯುತ ಶಿಕ್ಷಣ ಮಕ್ಕಳಿಗೆ ಅಗತ್ಯ: ಮುಖ್ಯಮಂತ್ರಿ ಯಡಿಯೂರಪ್ಪ

December 25, 2019
8:32 PM

ಉಡುಪಿ: ಇಂದಿನ ಮಕ್ಕಳು ಸತ್ಪ್ರಜೆಗಳಾಗಳು ಸಂಸ್ಕಾರಯುತ ಶಿಕ್ಷಣವು ಅತೀ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Advertisement
Advertisement

ಅವರು ಉಡುಪಿ ಶ್ರೀ ಕೃಷ್ಣ ಮಠ ಆವರಣದಲ್ಲಿ ಚಿಣ್ಣರ ಮಾಸೋತ್ಸವ ಹಾಗೂ ಸ್ವಚ್ಛ ಭಾರತ ಅಭಿಯಾನದಡಿ ಎಂ.ಆರ್.ಪಿ.ಎಲ್. ಸಂಸ್ಥೆಯ ರೂ. 2 ಕೋಟಿ ಅನುದಾನದಿಂದ ನಿರ್ಮಾಣಗೊಂಡಿರುವ ಶೌಚಾಲಯ ಸಮುಚ್ಚಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಭತ್ತವನ್ನು ತುಂಬುವ ಚೀಲಗಳಾಗದೆ ಭತ್ತವನ್ನು ಬೆಳೆಯುವ ಗದ್ದೆಗಳಾಗಬೇಕು ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದರು. ಮಕ್ಕಳು ಶುದ್ಧ ಪರಿಸರದಲ್ಲಿ ಆರೋಗ್ಯಯುತರಾಗಿ ಬಾಳಬೇಕು. ಉಡುಪಿ ಕೃಷ್ಣ ಮಠವು ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯ ಸರಕಾರ ಬಿಸಿಯೂಟ ಯೋಜನೆ ಜಾರಿಗೆ ತರುವ ಮೊದಲೇ ಕೃಷ್ಣ ಮಠವು ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿಗೆ ತಂದಿದೆ, ಸುಮಾರು 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿನಿತ್ಯ ಬಿಸಿಯೂಟ ಮಾಡುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಚ್ಛ ಭಾರತ ಯೊಜನೆಗೆ ಕೃಷ್ಣ ಮಠದ ಕೊಡುಗೆ ಅಪಾರವಾಗಿದೆ. ಇದು ದೇಶಕ್ಕೆ ಮಾದರಿ ಎಂದು ಮುಖ್ಯಮಂತ್ರಿ ನುಡಿದರು.

ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಜಗದೀಶ್, ಎಂ.ಆರ್.ಪಿ.ಎಲ್. ಸಂಸ್ಥೆಯ ಅಧಿಕಾರಿ ವೆಂಕಟೇಶ್ ಮತ್ತಿತರರು ಇದ್ದರು.

ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror