ಉಡುಪಿ: ಇಂದಿನ ಮಕ್ಕಳು ಸತ್ಪ್ರಜೆಗಳಾಗಳು ಸಂಸ್ಕಾರಯುತ ಶಿಕ್ಷಣವು ಅತೀ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಉಡುಪಿ ಶ್ರೀ ಕೃಷ್ಣ ಮಠ ಆವರಣದಲ್ಲಿ ಚಿಣ್ಣರ ಮಾಸೋತ್ಸವ ಹಾಗೂ ಸ್ವಚ್ಛ ಭಾರತ ಅಭಿಯಾನದಡಿ ಎಂ.ಆರ್.ಪಿ.ಎಲ್. ಸಂಸ್ಥೆಯ ರೂ. 2 ಕೋಟಿ ಅನುದಾನದಿಂದ ನಿರ್ಮಾಣಗೊಂಡಿರುವ ಶೌಚಾಲಯ ಸಮುಚ್ಚಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಭತ್ತವನ್ನು ತುಂಬುವ ಚೀಲಗಳಾಗದೆ ಭತ್ತವನ್ನು ಬೆಳೆಯುವ ಗದ್ದೆಗಳಾಗಬೇಕು ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದರು. ಮಕ್ಕಳು ಶುದ್ಧ ಪರಿಸರದಲ್ಲಿ ಆರೋಗ್ಯಯುತರಾಗಿ ಬಾಳಬೇಕು. ಉಡುಪಿ ಕೃಷ್ಣ ಮಠವು ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯ ಸರಕಾರ ಬಿಸಿಯೂಟ ಯೋಜನೆ ಜಾರಿಗೆ ತರುವ ಮೊದಲೇ ಕೃಷ್ಣ ಮಠವು ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿಗೆ ತಂದಿದೆ, ಸುಮಾರು 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿನಿತ್ಯ ಬಿಸಿಯೂಟ ಮಾಡುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಚ್ಛ ಭಾರತ ಯೊಜನೆಗೆ ಕೃಷ್ಣ ಮಠದ ಕೊಡುಗೆ ಅಪಾರವಾಗಿದೆ. ಇದು ದೇಶಕ್ಕೆ ಮಾದರಿ ಎಂದು ಮುಖ್ಯಮಂತ್ರಿ ನುಡಿದರು.
ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಜಗದೀಶ್, ಎಂ.ಆರ್.ಪಿ.ಎಲ್. ಸಂಸ್ಥೆಯ ಅಧಿಕಾರಿ ವೆಂಕಟೇಶ್ ಮತ್ತಿತರರು ಇದ್ದರು.
ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…