ಸುದ್ದಿಗಳು

ಸಚಿವರಾಗಲು ಇನ್ನೆಷ್ಟು ಬಾರಿ ಗೆಲ್ಲಬೇಕು…..?ಅಂಗಾರರಿಗೆ ಮಂತ್ರಿಗಿರಿ ತಪ್ಪಿರುವುದಕ್ಕೆ ಕಾರ್ಯಕರ್ತರ ಆಕ್ರೋಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
  • ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

ಸುಳ್ಯ: ಒಂದಲ್ಲ, ಎರಡಲ್ಲ, ಹ್ಯಾಟ್ರಿಕ್ ಅಲ್ಲ… ಗೆಲುವಿನ ಡಬಲ್ ಹ್ಯಾಟ್ರಿಕ್ ಪಡೆದರೂ ಸಚಿವ ಸ್ಥಾನವಿಲ್ಲ…! ಸುಳ್ಯ ಶಾಸಕ ಎಸ್.ಅಂಗಾರರು ಮಂತ್ರಿಯಾಗಲು ಇನ್ನೆಷ್ಟು ಬಾರಿ ಗೆಲ್ಲಬೇಕು.. ಇದು ಬಿಜೆಪಿಯ ಭದ್ರಕೋಟೆ ಎಂದು ಕರೆಯುವ ಸುಳ್ಯ ಕ್ಷೇತ್ರದ ಮತದಾರರ ಪ್ರಶ್ನೆ.

Advertisement
Advertisement

ಹೌದು ಮತ್ತೊಮ್ಮೆ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದೆ. ಇಂದು ಪ್ರಮಾಣ ವಚನ ಸ್ವೀಕರಿಸುವ ಯಡಿಯೂರಪ್ಪ ಮಂತ್ರಿ ಮಂಡಲದ ನೂತನ ಸಚಿವರ ಪಟ್ಟಿಯಲ್ಲಿ ಅಂಗಾರರ ಹೆಸರಿಲ್ಲ. ಈ ಮೂಲಕ ಸುಳ್ಯದ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಮತ್ತೊಮ್ಮೆ ನಿರಾಶೆಯ ಕಡಲಲ್ಲಿ ಮುಳುಗುವಂತಾಗಿದೆ. 1994 ರಿಂದ 2018ರವರೆಗೆ ನಡೆದ ಎಲ್ಲಾ ಚುನಾವಣೆಯಲ್ಲಿಯೂ ಗೆದ್ದು ಸತತ ಆರು ಭಾರಿ ಶಾಸಕರಾಗಿ ಆಯ್ಕೆಯಾದ ಅಂಗಾರರು ಈ ಬಾರಿ ಸಚಿವರಾಗುತ್ತಾರೆ ಎಂದೇ ನಂಬಲಾಗಿತ್ತು. ಸಂಭಾವ್ಯ ಸಚಿವರು ಎಂದು ಬಿಂಬಿಸಲಾದ ಎಲ್ಲಾ ಪಟ್ಟಿಯಲ್ಲಿಯೂ ಅಂಗಾರರ ಹೆಸರಿತ್ತು. ಆದರೆ ಅಂತಿಮ ಪಟ್ಟಿಯಲ್ಲಿ ಮಾತ್ರ ಅವರ ಹೆಸರು ಸೇರ್ಪಡೆಯಾಗಲೇ ಇಲ್ಲ. ಆ ಮೂಲಕ ಅಂಗಾರರು ಸಚಿವರಾಗುವ ಅವಕಾಶದಿಂದ ಮತ್ತೊಮ್ಮೆ ವಂಚಿತರಾಗಿದ್ದಾರೆ.

ಇದೇ ಮೊದಲಲ್ಲ..! : ಎಸ್.ಅಂಗಾರ ಸಚಿವರಾಗುತ್ತಾತರೆ ಎಂದು ನಂಬಿ ಸಚಿವ ಸ್ಥಾನದಿಂದ ವಂಚಿತರಾಗುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಕಡೆಗಣಿಸಲ್ಪಟ್ಟಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಇತ್ತು. ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಬೇಡಿಕೆ ಇದ್ದರೂ ಅವಕಾಶ ಸಿಗಲಿಲ್ಲ. ಬಳಿಕ 2008 ರಲ್ಲಿ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದಾಗ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಅವಕಾಶ ನೀಡಲಿಲ್ಲ. ಬಳಿಕ ಸುಳ್ಯದವರೇ ಆದ ಡಿ.ವಿ.ಸದಾನಂದ ಗೌಡ ಮುಖ್ಯಮಂತ್ರಿ ಆದರೂ ಅಂಗಾರರನ್ನು ಸಚಿವರನ್ನಾಗಿ ಮಾಡಲಿಲ್ಲ. ಬಳಿಕ ಜಗದೀಶ್ ಶೆಟ್ಟರ್ ಅಧಿಕಾರ ಅವಧಿಯಲ್ಲೂ ಅಂಗಾರರಿಗೆ ಸಚಿವ ಗಿರಿ ಗಿಟ್ಟಿಸಲಾಗಲಿಲ್ಲ. ಆ ಸಂದರ್ಭದಲ್ಲಿ ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಸಾರ್ವಜನಿಕವಾಗಿಯೇ ಪ್ರತಿಭಟನೆ ನಡೆದಿತ್ತು. ಬಿಜೆಪಿ ಸುಳ್ಯ ಮಂಡಲ ಸಮಿತಿಯ ಎಲ್ಲಾ ಪದಾಧಿಕಾರಿಗಳು ಕೂಡ ಅಂದುವರಾಜಿನಾಮೆ ನೀಡಿ ಒಂದು ತಿಂಗಳ ಕಾಲ ಬಿಜೆಪಿ ಕಚೇರಿಯೇ ಮುಚ್ಚಿದ ಪ್ರಸಂಗ ನಡೆದಿತ್ತು. 2018ರಲ್ಲಿ ಬಿಜೆಪಿ ಸರಕಾರ ಒಂದು ದಿವಸ ಮಾತ್ರ ಇದ್ದ ಕಾರಣ ಆಸೆ ಕಮರಿ ಹೋಗಿತ್ತು. ಆದರೆ ಈ ಬಾರಿ ಅಂಗಾರರಿಗೆ ಮಂತ್ರಿ ಸ್ಥಾನ ಖಚಿತ ಎಂದೇ ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವರನ್ನು ಕೈ ಬಿಡಲಾಗಿದೆ. ಸಾರ್ವಜನಿಕರ ಹಾರೈಕೆ, ಕಾರ್ಯಕರ್ತರ ಆಸೆ, ಬೇಡಿಕೆ ಯಾವುದೂ ಕೈಗೂಡಲೇ ಇಲ್ಲ.. ಇದೀಗ ಸುಳ್ಯದ ಬಿಜೆಪಿ ಕಾರ್ಯಕರ್ತರಲ್ಲಿ ನಿರಾಸೆ, ಆಕ್ರೋಶ ಮಾತ್ರ ಉಳಿದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಅವರ ಅಸಮಾಧಾನ ಹೊರ ಬೀಳುತಿದೆ. ತಮ್ಮ ಭಾವನೆಗಳಿಗೆ ಪಕ್ಷ ಬೆಲೆ ನೀಡಿಲ್ಲ ಎಂಬ ಮಾತನ್ನು ನಾಯಕರು, ಕಾರ್ಯಕರ್ತರು ಹೊರ ಹಾಕುತ್ತಿದ್ದಾರೆ.

 ದ.ಕ.ಜಿಲ್ಲೆಗೆ ಶೂನ್ಯ: ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಸ್ಥಾನಗಳ ಪೈಕಿ ಏಳನ್ನು ಗೆದ್ದು ಬೀಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಗೆ ಸಚಿವರ ಸಂಖ್ಯೆಯಲ್ಲಿ ಮಾತ್ರ ಶೂನ್ಯ ಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯಾವೊಬ್ಬ ಶಾಸಕನೂ ನೂತನ ಸಚಿವರ ಪಟ್ಟಿಯಲ್ಲಿ ಇಲ್ಲ. ಏಳು ಮಂದಿ ಶಾಸಕರ ಪೈಕಿ ಆರು ಬಾರಿ ಗೆದ್ದಿರುವ ಸುಳ್ಯ ಶಾಸಕ ಅಂಗಾರರೇ ಹಿರಿಯ ಸದಸ್ಯ. ಆದುದರಿಂದ ಅಂಗಾರರಿಗೆ ಮಂತ್ರಿ ಗಿರಿ ಖಚಿತ ಎಂದೇ ನಂಬಲಾಗಿತ್ತು. ಆದರೆ ದ.ಕ.ಜಿಲ್ಲೆಯನ್ನು, ಮಲೆನಾಡಾದ ಸುಳ್ಯ ಕ್ಷೇತ್ರವನ್ನು ಬಿಜೆಪಿ ಮತ್ತೊಮ್ಮೆ ಕಡೆಗಣಿಸಿದೆ ಎಂಬುದು ಕಾರ್ಯಕರ್ತರ ಆಕ್ರೋಶ.

ಕಳೆದ ಬಾರಿ ಜಿಲ್ಲೆಯಲ್ಲಿ ಏಳು ಮಂದಿ ಕಾಂಗ್ರೆಸ್ ಶಾಸಕರು ಗೆದ್ದಾಗ ಇಲ್ಲಿನ ಮೂವರು ಶಾಸಕರು ಸೇರಿ ದ.ಕ. ಜಿಲ್ಲೆಯ ನಾಲ್ಕು ಮಂದಿಗೆ ಸಚಿವ ಸ್ಥಾನ ನೀಡಲಾಗಿತ್ತು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿಯೂ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಿಗೆ ಸಚಿವ ಸ್ಥಾನ ನೀಡಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

6 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

6 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

7 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

13 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

14 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

21 hours ago