ಸುದ್ದಿಗಳು

ಸಚಿವರಾಗಲು ಇನ್ನೆಷ್ಟು ಬಾರಿ ಗೆಲ್ಲಬೇಕು…..?ಅಂಗಾರರಿಗೆ ಮಂತ್ರಿಗಿರಿ ತಪ್ಪಿರುವುದಕ್ಕೆ ಕಾರ್ಯಕರ್ತರ ಆಕ್ರೋಶ

Share
  • ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

ಸುಳ್ಯ: ಒಂದಲ್ಲ, ಎರಡಲ್ಲ, ಹ್ಯಾಟ್ರಿಕ್ ಅಲ್ಲ… ಗೆಲುವಿನ ಡಬಲ್ ಹ್ಯಾಟ್ರಿಕ್ ಪಡೆದರೂ ಸಚಿವ ಸ್ಥಾನವಿಲ್ಲ…! ಸುಳ್ಯ ಶಾಸಕ ಎಸ್.ಅಂಗಾರರು ಮಂತ್ರಿಯಾಗಲು ಇನ್ನೆಷ್ಟು ಬಾರಿ ಗೆಲ್ಲಬೇಕು.. ಇದು ಬಿಜೆಪಿಯ ಭದ್ರಕೋಟೆ ಎಂದು ಕರೆಯುವ ಸುಳ್ಯ ಕ್ಷೇತ್ರದ ಮತದಾರರ ಪ್ರಶ್ನೆ.

ಹೌದು ಮತ್ತೊಮ್ಮೆ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದೆ. ಇಂದು ಪ್ರಮಾಣ ವಚನ ಸ್ವೀಕರಿಸುವ ಯಡಿಯೂರಪ್ಪ ಮಂತ್ರಿ ಮಂಡಲದ ನೂತನ ಸಚಿವರ ಪಟ್ಟಿಯಲ್ಲಿ ಅಂಗಾರರ ಹೆಸರಿಲ್ಲ. ಈ ಮೂಲಕ ಸುಳ್ಯದ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಮತ್ತೊಮ್ಮೆ ನಿರಾಶೆಯ ಕಡಲಲ್ಲಿ ಮುಳುಗುವಂತಾಗಿದೆ. 1994 ರಿಂದ 2018ರವರೆಗೆ ನಡೆದ ಎಲ್ಲಾ ಚುನಾವಣೆಯಲ್ಲಿಯೂ ಗೆದ್ದು ಸತತ ಆರು ಭಾರಿ ಶಾಸಕರಾಗಿ ಆಯ್ಕೆಯಾದ ಅಂಗಾರರು ಈ ಬಾರಿ ಸಚಿವರಾಗುತ್ತಾರೆ ಎಂದೇ ನಂಬಲಾಗಿತ್ತು. ಸಂಭಾವ್ಯ ಸಚಿವರು ಎಂದು ಬಿಂಬಿಸಲಾದ ಎಲ್ಲಾ ಪಟ್ಟಿಯಲ್ಲಿಯೂ ಅಂಗಾರರ ಹೆಸರಿತ್ತು. ಆದರೆ ಅಂತಿಮ ಪಟ್ಟಿಯಲ್ಲಿ ಮಾತ್ರ ಅವರ ಹೆಸರು ಸೇರ್ಪಡೆಯಾಗಲೇ ಇಲ್ಲ. ಆ ಮೂಲಕ ಅಂಗಾರರು ಸಚಿವರಾಗುವ ಅವಕಾಶದಿಂದ ಮತ್ತೊಮ್ಮೆ ವಂಚಿತರಾಗಿದ್ದಾರೆ.

ಇದೇ ಮೊದಲಲ್ಲ..! : ಎಸ್.ಅಂಗಾರ ಸಚಿವರಾಗುತ್ತಾತರೆ ಎಂದು ನಂಬಿ ಸಚಿವ ಸ್ಥಾನದಿಂದ ವಂಚಿತರಾಗುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಕಡೆಗಣಿಸಲ್ಪಟ್ಟಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಇತ್ತು. ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಬೇಡಿಕೆ ಇದ್ದರೂ ಅವಕಾಶ ಸಿಗಲಿಲ್ಲ. ಬಳಿಕ 2008 ರಲ್ಲಿ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದಾಗ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಅವಕಾಶ ನೀಡಲಿಲ್ಲ. ಬಳಿಕ ಸುಳ್ಯದವರೇ ಆದ ಡಿ.ವಿ.ಸದಾನಂದ ಗೌಡ ಮುಖ್ಯಮಂತ್ರಿ ಆದರೂ ಅಂಗಾರರನ್ನು ಸಚಿವರನ್ನಾಗಿ ಮಾಡಲಿಲ್ಲ. ಬಳಿಕ ಜಗದೀಶ್ ಶೆಟ್ಟರ್ ಅಧಿಕಾರ ಅವಧಿಯಲ್ಲೂ ಅಂಗಾರರಿಗೆ ಸಚಿವ ಗಿರಿ ಗಿಟ್ಟಿಸಲಾಗಲಿಲ್ಲ. ಆ ಸಂದರ್ಭದಲ್ಲಿ ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಸಾರ್ವಜನಿಕವಾಗಿಯೇ ಪ್ರತಿಭಟನೆ ನಡೆದಿತ್ತು. ಬಿಜೆಪಿ ಸುಳ್ಯ ಮಂಡಲ ಸಮಿತಿಯ ಎಲ್ಲಾ ಪದಾಧಿಕಾರಿಗಳು ಕೂಡ ಅಂದುವರಾಜಿನಾಮೆ ನೀಡಿ ಒಂದು ತಿಂಗಳ ಕಾಲ ಬಿಜೆಪಿ ಕಚೇರಿಯೇ ಮುಚ್ಚಿದ ಪ್ರಸಂಗ ನಡೆದಿತ್ತು. 2018ರಲ್ಲಿ ಬಿಜೆಪಿ ಸರಕಾರ ಒಂದು ದಿವಸ ಮಾತ್ರ ಇದ್ದ ಕಾರಣ ಆಸೆ ಕಮರಿ ಹೋಗಿತ್ತು. ಆದರೆ ಈ ಬಾರಿ ಅಂಗಾರರಿಗೆ ಮಂತ್ರಿ ಸ್ಥಾನ ಖಚಿತ ಎಂದೇ ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವರನ್ನು ಕೈ ಬಿಡಲಾಗಿದೆ. ಸಾರ್ವಜನಿಕರ ಹಾರೈಕೆ, ಕಾರ್ಯಕರ್ತರ ಆಸೆ, ಬೇಡಿಕೆ ಯಾವುದೂ ಕೈಗೂಡಲೇ ಇಲ್ಲ.. ಇದೀಗ ಸುಳ್ಯದ ಬಿಜೆಪಿ ಕಾರ್ಯಕರ್ತರಲ್ಲಿ ನಿರಾಸೆ, ಆಕ್ರೋಶ ಮಾತ್ರ ಉಳಿದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಅವರ ಅಸಮಾಧಾನ ಹೊರ ಬೀಳುತಿದೆ. ತಮ್ಮ ಭಾವನೆಗಳಿಗೆ ಪಕ್ಷ ಬೆಲೆ ನೀಡಿಲ್ಲ ಎಂಬ ಮಾತನ್ನು ನಾಯಕರು, ಕಾರ್ಯಕರ್ತರು ಹೊರ ಹಾಕುತ್ತಿದ್ದಾರೆ.

 ದ.ಕ.ಜಿಲ್ಲೆಗೆ ಶೂನ್ಯ: ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಸ್ಥಾನಗಳ ಪೈಕಿ ಏಳನ್ನು ಗೆದ್ದು ಬೀಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಗೆ ಸಚಿವರ ಸಂಖ್ಯೆಯಲ್ಲಿ ಮಾತ್ರ ಶೂನ್ಯ ಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯಾವೊಬ್ಬ ಶಾಸಕನೂ ನೂತನ ಸಚಿವರ ಪಟ್ಟಿಯಲ್ಲಿ ಇಲ್ಲ. ಏಳು ಮಂದಿ ಶಾಸಕರ ಪೈಕಿ ಆರು ಬಾರಿ ಗೆದ್ದಿರುವ ಸುಳ್ಯ ಶಾಸಕ ಅಂಗಾರರೇ ಹಿರಿಯ ಸದಸ್ಯ. ಆದುದರಿಂದ ಅಂಗಾರರಿಗೆ ಮಂತ್ರಿ ಗಿರಿ ಖಚಿತ ಎಂದೇ ನಂಬಲಾಗಿತ್ತು. ಆದರೆ ದ.ಕ.ಜಿಲ್ಲೆಯನ್ನು, ಮಲೆನಾಡಾದ ಸುಳ್ಯ ಕ್ಷೇತ್ರವನ್ನು ಬಿಜೆಪಿ ಮತ್ತೊಮ್ಮೆ ಕಡೆಗಣಿಸಿದೆ ಎಂಬುದು ಕಾರ್ಯಕರ್ತರ ಆಕ್ರೋಶ.

ಕಳೆದ ಬಾರಿ ಜಿಲ್ಲೆಯಲ್ಲಿ ಏಳು ಮಂದಿ ಕಾಂಗ್ರೆಸ್ ಶಾಸಕರು ಗೆದ್ದಾಗ ಇಲ್ಲಿನ ಮೂವರು ಶಾಸಕರು ಸೇರಿ ದ.ಕ. ಜಿಲ್ಲೆಯ ನಾಲ್ಕು ಮಂದಿಗೆ ಸಚಿವ ಸ್ಥಾನ ನೀಡಲಾಗಿತ್ತು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿಯೂ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಿಗೆ ಸಚಿವ ಸ್ಥಾನ ನೀಡಿತ್ತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

7 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

7 hours ago

ಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳು

ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…

7 hours ago

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…

16 hours ago

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

18 hours ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

19 hours ago