ಸುಳ್ಯ: ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಹೀಗಾಗಿ ಈಗ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ. ಈ ಕಾರಣದಿಂದ ಸಚಿವ ಸ್ಥಾನ ಲಭ್ಯವಾಗುವವರೆಗೆ ಸುಳ್ಯದಲ್ಲಿ ಪಕ್ಷದ ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡಲದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಮುಖರು ಸಾಮೂಹಿಕವಾಗಿ ತಟಸ್ಥರಾಗುವ ಬಗ್ಗೆ ಯೋಚಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖರಿಗೆ ತಿಳಿಸಲಾಗುತ್ತದೆ ಎಂದು ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…