Advertisement
Categories: MIRROR FOCUS

ಸತತ ನಾಲ್ಕನೇ ದಿನವೂ 100 ಮಿಮೀ ದಾಟಿದ ಮಳೆ : ಮಳೆ ಅವಾಂತರಕ್ಕೆ ನೆರವಾದರು ಹಲವಾರು ಮಂದಿ

Share

ಸತತ 4 ನೇ ದಿನವೂ 100 ಮಿಮೀ ಮಳೆ ದಾಟಿದೆ. ಇಷ್ಟು ದಿನವೂ ರೆಡ್ ಅಲರ್ಟ್..!. ಹಲವು ಕಡೆ ಸಂಕಷ್ಟ, ಇನ್ನೂ ಹಲವರಿಗೆ ಸಮಸ್ಯೆ…! .‌ಈ ನಡುವೆ ಸಹಾಯಕ್ಕೆ ಬಂದವರು ಹಲವರು. ಅಧಿಕಾರಿಗಳು ಎಲ್ಲೆಲ್ಲಾ ಓಡಾಡಿದರು, ಊಟ ಸವಿದರು. ಜನಪ್ರತಿನಿಧಿಗಳಿಗೆ ಕೆಲಸವೇ ಇಲ್ಲವಾಯಿತು….! ಈ ಕಡೆಗೆ ಫೋಕಸ್..


ಮಳೆಯ ರುದ್ರ ನರ್ತನ ಮುಂದುವರಿದಿದೆ. ಸುಳ್ಯ ತಾಲೂಕಿನ ಕಲ್ಮಕಾರು ,ಬಾಳುಗೋಡು, ಸುಬ್ರಹ್ಮಣ್ಯ, ಸಂಪಾಜೆ ಮುಂತಾದ ಗ್ರಾಮಗಳಲ್ಲಿ ಮಳೆಯು ತನ್ನ ಭೀಕರತೆಯನ್ನು ಪ್ರದರ್ಶಿಸಿದೆ. ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

ಹಲವು ಮನೆಗಳಿಗೆ ನೀರು ನುಗ್ಗಿ ಅವರು ಗಂಜೀ ಕೇಂದ್ರಗಳಲ್ಲಿ ವಾಸಿಸುವಂತೆ ಆಗಿದೆ. ಜಿಲ್ಲಾಡಳಿತವೂ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಿದೆ.

ಕಲ್ಮಕಾರಿನಲ್ಲಿ ತೆರೆಯಲಾದ ಗಂಜಿ ಕೇಂದ್ರಕ್ಕೆ ಸುಳ್ಯ ತಹಶೀಲ್ದಾರ್ ಭೇಟಿ ನೀಡಿದರು.

ಮಳೆ ಪೀಡಿತ ಕಲ್ಮಕಾರು ಗಂಜಿ ಕೇಂದ್ರಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವೂ ಆಹಾರದ ವ್ಯವಸ್ಥೆಯನ್ನು ಕಲ್ಪಿಸಿದೆ. ಶ್ರೀ ದೇವರ ಅನ್ನ ಪ್ರಸಾದವನ್ನು ಒದಗಿಸಲಾಗುತ್ತಿದೆ. ಅಲ್ಲದೇ ದೇವಾಲಯದಿಂದ ಚಾಪೆ,ಹೊದಿಕೆಗಳನ್ನು ಉಚಿತವಾಗಿ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಯುವಕರ ತಂಡವೂ ಅಹಾರವನ್ನು ಗಂಜಿ ಕೇಂದ್ರಕ್ಕೆ ಒದಗಿಸುವ ಕಾರ್ಯವನ್ನು ನಿರಂತರವಾಗಿ ಅಚ್ಚುಕಟ್ಟಾಗಿ ಮಾಡುತ್ತಿದೆ. ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಗುರುಪ್ರಸಾದ್ ಪಂಜ ಹಾಗೂ ಇತರರು ತಮ್ಮ ಕಾರಿನಲ್ಲಿ ಸುಮಾರು 25 ಕಿಮೀ ದೂರದ ಕಲ್ಮಕಾರಿಗೆ ತಲಪಿಸಿ   ಮಾನವೀಯ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.

 

ಶಾಲೆಯಲ್ಲಿ ತೆರೆಯಲಾದ ಕಲ್ಮಕಾರು ಗಂಜಿ ಕೇಂದ್ರದಲ್ಲಿ 10 ಕುಟುಂಬದ 26 ಮಂದಿ ಅಶ್ರಯ ಪಡೆದಿದ್ದಾರೆ.

ಪ್ಲಡ್ ರೆಸ್ಕ್ಯೂ ವಾಲಿಂಟಿಯರ್ ಗ್ರೂಪ್‌ ನ ಸದಸ್ಯರೂ ಕೇಂದ್ರಕ್ಕೆ ಭೇಟಿ ನೀಡಿದರು.

ಮಳೆ ಕಡಿಮೆಯಾಗದಿದ್ದಾರೆ , ಸುಬ್ರಹ್ಮಣ್ಯ ಹಾಗೂ ಕಲ್ಮಕಾರು ನಡುವಿನ ರಸ್ತೆ ಸಂಪರ್ಕವೂ ಕಡಿತಗೊಳ್ಳುವ ಸಾಧ್ಯತೆ ಇದ್ದು ಆ ಸಂದರ್ಭದಲ್ಲಿ ಗಂಜಿ ಕೇಂದ್ರದಲ್ಲೆ ಆಹಾರ ತಯಾರಿಸುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆದಿದೆ.

ಕೆಲವು ಕಡೆ‌ ಮೂರ್ನಾಕು‌ ದಿನಗಳಿಂದ‌ ವಿದ್ಯುತ್ ವ್ಯವಸ್ಥೆ ಇಲ್ಲವಾಗಿದೆ. ಗಾಳಿಗೆ ಮರ ಬಿದ್ದು ಹಾನಿಯಾಗಿದೆ. ಹೀಗಾಗಿ ಜನರೇ ಗಡಿಬಿಡಿ ಇಲ್ಲ ಎನ್ನುತ್ತಾ ಹೀಗೊಂದು‌ ಸಂದೇಶ ನೀಡಿದ್ದಾರೆ,

ಪ್ರೀತಿಯ ಲೈನ್ ಮೆನ್ ಅವರುಗಳಿಗೆ
ಮಳೆಯ ಆರ್ಭಟ ನಿಲ್ಲುವವರೆಗೂ ಕರೆಂಟ್ ಇಲ್ಲ ಅಂದ್ರು ಪರವಾಗಿಲ್ಲ. ನಾವು ನಿಮಗೆ ಬೈಯೊಲ್ಲ, ಕಿರಿಕಿರಿ ಮಾಡಲ್ಲ, ಒತ್ತಡ ಹೇರಲ್ಲ. ಧಾರಾಕಾರ ಮಳೆ-ಗಾಳಿ ಇದೆ. ಕಂಬಗಳು ಜಾರುತ್ತವೆ- ಬಾಗುತ್ತವೆ. ಮಣ್ಣು ಸಡಿಲವಾಗಿ ಮರಗಳು ತಂತಿಮೇಲೆ ಉರುಳಿ ಕಂಬಗಳ ಮುರಿಯುತ್ತಿವೆ. ದಯಮಾಡಿ ನಿಮ್ಮ‌ ರಕ್ಷಣೆ ಮೊದಲು ಆಧ್ಯತೆ ಕೊಡಿ. ನಮ್ಮಂತೆಯೆ ನಿಮಗೂ ಕುಟುಂಬವಿದೆ.
ಈ ಬೀಕರ ಮಳೆಯಲ್ಲಿ ನೀವು ಸರ್ಕಸ್ ರೀತಿಯಲ್ಲಿ ದುರಸ್ಥಿ ಕಾರ್ಯಮಾಡಿ ನಮ್ಮಗಳಿಗೆ ಬೆಳಕು ನೀಡಿ ನಿಮ್ಮ ಕುಟುಂಬ ಕತ್ತಲೆಯಲ್ಲಿ ಕವಿಯುವುದು ಬೇಡವೇ ಬೇಡ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

1 hour ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

1 hour ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

1 hour ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

1 hour ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

1 hour ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

11 hours ago