Advertisement
Categories: MIRROR FOCUS

ಸತತ ನಾಲ್ಕನೇ ದಿನವೂ 100 ಮಿಮೀ ದಾಟಿದ ಮಳೆ : ಮಳೆ ಅವಾಂತರಕ್ಕೆ ನೆರವಾದರು ಹಲವಾರು ಮಂದಿ

Share

ಸತತ 4 ನೇ ದಿನವೂ 100 ಮಿಮೀ ಮಳೆ ದಾಟಿದೆ. ಇಷ್ಟು ದಿನವೂ ರೆಡ್ ಅಲರ್ಟ್..!. ಹಲವು ಕಡೆ ಸಂಕಷ್ಟ, ಇನ್ನೂ ಹಲವರಿಗೆ ಸಮಸ್ಯೆ…! .‌ಈ ನಡುವೆ ಸಹಾಯಕ್ಕೆ ಬಂದವರು ಹಲವರು. ಅಧಿಕಾರಿಗಳು ಎಲ್ಲೆಲ್ಲಾ ಓಡಾಡಿದರು, ಊಟ ಸವಿದರು. ಜನಪ್ರತಿನಿಧಿಗಳಿಗೆ ಕೆಲಸವೇ ಇಲ್ಲವಾಯಿತು….! ಈ ಕಡೆಗೆ ಫೋಕಸ್..


ಮಳೆಯ ರುದ್ರ ನರ್ತನ ಮುಂದುವರಿದಿದೆ. ಸುಳ್ಯ ತಾಲೂಕಿನ ಕಲ್ಮಕಾರು ,ಬಾಳುಗೋಡು, ಸುಬ್ರಹ್ಮಣ್ಯ, ಸಂಪಾಜೆ ಮುಂತಾದ ಗ್ರಾಮಗಳಲ್ಲಿ ಮಳೆಯು ತನ್ನ ಭೀಕರತೆಯನ್ನು ಪ್ರದರ್ಶಿಸಿದೆ. ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

ಹಲವು ಮನೆಗಳಿಗೆ ನೀರು ನುಗ್ಗಿ ಅವರು ಗಂಜೀ ಕೇಂದ್ರಗಳಲ್ಲಿ ವಾಸಿಸುವಂತೆ ಆಗಿದೆ. ಜಿಲ್ಲಾಡಳಿತವೂ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಿದೆ.

ಕಲ್ಮಕಾರಿನಲ್ಲಿ ತೆರೆಯಲಾದ ಗಂಜಿ ಕೇಂದ್ರಕ್ಕೆ ಸುಳ್ಯ ತಹಶೀಲ್ದಾರ್ ಭೇಟಿ ನೀಡಿದರು.

ಮಳೆ ಪೀಡಿತ ಕಲ್ಮಕಾರು ಗಂಜಿ ಕೇಂದ್ರಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವೂ ಆಹಾರದ ವ್ಯವಸ್ಥೆಯನ್ನು ಕಲ್ಪಿಸಿದೆ. ಶ್ರೀ ದೇವರ ಅನ್ನ ಪ್ರಸಾದವನ್ನು ಒದಗಿಸಲಾಗುತ್ತಿದೆ. ಅಲ್ಲದೇ ದೇವಾಲಯದಿಂದ ಚಾಪೆ,ಹೊದಿಕೆಗಳನ್ನು ಉಚಿತವಾಗಿ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಯುವಕರ ತಂಡವೂ ಅಹಾರವನ್ನು ಗಂಜಿ ಕೇಂದ್ರಕ್ಕೆ ಒದಗಿಸುವ ಕಾರ್ಯವನ್ನು ನಿರಂತರವಾಗಿ ಅಚ್ಚುಕಟ್ಟಾಗಿ ಮಾಡುತ್ತಿದೆ. ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ಗುರುಪ್ರಸಾದ್ ಪಂಜ ಹಾಗೂ ಇತರರು ತಮ್ಮ ಕಾರಿನಲ್ಲಿ ಸುಮಾರು 25 ಕಿಮೀ ದೂರದ ಕಲ್ಮಕಾರಿಗೆ ತಲಪಿಸಿ   ಮಾನವೀಯ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.

 

ಶಾಲೆಯಲ್ಲಿ ತೆರೆಯಲಾದ ಕಲ್ಮಕಾರು ಗಂಜಿ ಕೇಂದ್ರದಲ್ಲಿ 10 ಕುಟುಂಬದ 26 ಮಂದಿ ಅಶ್ರಯ ಪಡೆದಿದ್ದಾರೆ.

ಪ್ಲಡ್ ರೆಸ್ಕ್ಯೂ ವಾಲಿಂಟಿಯರ್ ಗ್ರೂಪ್‌ ನ ಸದಸ್ಯರೂ ಕೇಂದ್ರಕ್ಕೆ ಭೇಟಿ ನೀಡಿದರು.

ಮಳೆ ಕಡಿಮೆಯಾಗದಿದ್ದಾರೆ , ಸುಬ್ರಹ್ಮಣ್ಯ ಹಾಗೂ ಕಲ್ಮಕಾರು ನಡುವಿನ ರಸ್ತೆ ಸಂಪರ್ಕವೂ ಕಡಿತಗೊಳ್ಳುವ ಸಾಧ್ಯತೆ ಇದ್ದು ಆ ಸಂದರ್ಭದಲ್ಲಿ ಗಂಜಿ ಕೇಂದ್ರದಲ್ಲೆ ಆಹಾರ ತಯಾರಿಸುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆದಿದೆ.

ಕೆಲವು ಕಡೆ‌ ಮೂರ್ನಾಕು‌ ದಿನಗಳಿಂದ‌ ವಿದ್ಯುತ್ ವ್ಯವಸ್ಥೆ ಇಲ್ಲವಾಗಿದೆ. ಗಾಳಿಗೆ ಮರ ಬಿದ್ದು ಹಾನಿಯಾಗಿದೆ. ಹೀಗಾಗಿ ಜನರೇ ಗಡಿಬಿಡಿ ಇಲ್ಲ ಎನ್ನುತ್ತಾ ಹೀಗೊಂದು‌ ಸಂದೇಶ ನೀಡಿದ್ದಾರೆ,

ಪ್ರೀತಿಯ ಲೈನ್ ಮೆನ್ ಅವರುಗಳಿಗೆ
ಮಳೆಯ ಆರ್ಭಟ ನಿಲ್ಲುವವರೆಗೂ ಕರೆಂಟ್ ಇಲ್ಲ ಅಂದ್ರು ಪರವಾಗಿಲ್ಲ. ನಾವು ನಿಮಗೆ ಬೈಯೊಲ್ಲ, ಕಿರಿಕಿರಿ ಮಾಡಲ್ಲ, ಒತ್ತಡ ಹೇರಲ್ಲ. ಧಾರಾಕಾರ ಮಳೆ-ಗಾಳಿ ಇದೆ. ಕಂಬಗಳು ಜಾರುತ್ತವೆ- ಬಾಗುತ್ತವೆ. ಮಣ್ಣು ಸಡಿಲವಾಗಿ ಮರಗಳು ತಂತಿಮೇಲೆ ಉರುಳಿ ಕಂಬಗಳ ಮುರಿಯುತ್ತಿವೆ. ದಯಮಾಡಿ ನಿಮ್ಮ‌ ರಕ್ಷಣೆ ಮೊದಲು ಆಧ್ಯತೆ ಕೊಡಿ. ನಮ್ಮಂತೆಯೆ ನಿಮಗೂ ಕುಟುಂಬವಿದೆ.
ಈ ಬೀಕರ ಮಳೆಯಲ್ಲಿ ನೀವು ಸರ್ಕಸ್ ರೀತಿಯಲ್ಲಿ ದುರಸ್ಥಿ ಕಾರ್ಯಮಾಡಿ ನಮ್ಮಗಳಿಗೆ ಬೆಳಕು ನೀಡಿ ನಿಮ್ಮ ಕುಟುಂಬ ಕತ್ತಲೆಯಲ್ಲಿ ಕವಿಯುವುದು ಬೇಡವೇ ಬೇಡ..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago