ಮಂಗಳೂರು: 2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಪದವಿ ಪಡೆದಿರುವ 21 ರಿಂದ 30 ವಯೋಮಾನದ ಮಿತಿಯೊಳಗಿನ ಅಭ್ಯರ್ಥಿಗಳಿಗೆ 90 ದಿನಗಳ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 31.
ಅರ್ಜಿಯನ್ನು ಆನ್ಲೈನ್ ವೆಬ್ಸೈಟ್ ಮೂಲಕ ಸಲ್ಲಿಸಿ ಹಾರ್ಡ್ಕಾಪಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇವರನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…