Advertisement
ಅನುಕ್ರಮ

ಸಮಯಕ್ಕಿಲ್ಲ ಬ್ರೇಕ್

Share

ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ.  ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ  ಗೊತ್ತಾಗಲ್ಲಿಲ್ಲ, ಅಂದೆ.  ಹೇಯ್ ತೋಟದ  ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ  ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ  ತಲೆ ತುರಿಸತೊಡಗಿದೆ.

ನನಗಂತೂ ಸಮಯ ಸರಿಯುವುದೇ ಗೊತ್ತಾಗುವುದಿಲ್ಲ. ಹಳ್ಳಿ ಮನೆಗಳಲ್ಲಿ ಕೈ ತುಂಬಾ ಕೆಲಸ ಇದ್ದದ್ದೇ. ಮನೆ ಒಳಗಿನ  ಕೆಲಸ, ದನ ಕರುಗಳ ಉಸ್ತುವಾರಿ, ಕೈ ತೋಟದಲ್ಲಿ ಬೆಳೆಯುವ ಹಣ್ಣು ತರಕಾರಿ ಹೂ ಗಿಡಗಳತ್ತ ಗಮನ, ಊಟ ಕಾಫಿಗೆ ಜನಗಳಿದ್ದರಂತೂ ಕೇಳುವುದೇ ಬೇಡ. ಹೀಗೆ ರಿಲೇ  ಓಡಿದಂತೆ ಪುರುಸೊತ್ತಿಲ್ಲದ ಜೀವನ. ಹೀಗೆ ಪೂರ್ಣ ಪ್ರಮಾಣದಲ್ಲಿ ವ್ಯಸ್ತರಾಗಿರುವುದೂ ಸಂತೋಷವೇ.
ಕೆಲವೊಮ್ಮೆ ಕೆಲಸಗಳು ಒಂದರ ಹಿಂದೊಂದು ಮಾಡುವುದು ಅನಿವಾರ್ಯ. ಆಯಾ ಸಮಯದಲ್ಲಿ ನಡೆಯಬೇಕಾದ್ದನ್ನು ಮಾಡಬೇಕಷ್ಟೆ. ಉದಾಹರಣೆಗೆ  ವೆನಿಲ್ಲಾ ಬೆಳೆಸುವವರು ಬೆಳಗಿನ ಹೊತ್ತೇ ತೋಟಗಳಿಗೆ  ಹೋಗಿ ಹೂವುಗಳ   ಪರಾಗ ಸ್ಪರ್ಶ ಮಾಡಬೇಕು, ಸರಿಯಾದ ಸಮಯದಲ್ಲಿ   ಪರಾಗಸ್ಪರ್ಶ  ಮಾಡಿದರೆ   ಮಾತ್ರವೇ ವೆನಿಲ್ಲಾ ಕೋಡುಗಳು ಉಳಿಯುತ್ತವೆ, ಕೈಗೆ ನಾಲ್ಕು ಕಾಸು ಬರುತ್ತದೆ. ಮಳೆ ಹೆಚ್ಚು ಕಮ್ಮಿಯಾದರೆ ವೆನಿಲ್ಲಾ ಕೋಡು ನೆಲಕ್ಕೆ. ಅಡಿಕೆ ಬೆಳೆಗಾರರ ಕಥೆಯೂ ಬೇರೆಯಲ್ಲಾ. ಕಾಲ ಕಾಲಕ್ಕೆ ಸರಿಯಾಗಿ ಆಗ  ಬೇಕಾದ ಕೆಲಸಗಳನ್ನು ಮಾಡುವ ಅನಿವಾರ್ಯತೆ.  ನುರಿತ ಕೆಲಸಗಾರರ ಕೊರತೆ ಅತಿಯಾಗಿಿದೆ. ಹಾಗಾಾಗಿ ಯಾವುದೇ ಕೆಲಸಗಳನ್ನು ಸಮಯದಲ್ಲಿ ಮಾಡಿ ಮುಗಿಸುವ ನಂಬಿಕೆ ಯಾರಿಗೂ ಇಲ್ಲ. ಮಳೆಗಾಲದ ಆರಂಭಿಕ ಹಂತದಲ್ಲಿ ಮದ್ದು ಬಿಡುವ ಸಂಭ್ರಮ. ಬಿಸಿಲು ಮಳೆಯ ಕಣ್ಣಾಮುಚ್ಚಾಲೆ ಗೆ ರೈತ ಕಂಗಾಲು.
ಯಾರಿಗೂ ಕಾಯದೇ ಮುಂದೆ ಹೋಗುವುದೇ ನನ್ನ ಕೆಲಸ ಎಂದು  ಸಮಯ  ನಡೆಯುತ್ತಲೇ ಇರುತ್ತದೆ ಬ್ರೇಕ್ ಇಲ್ಲದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

26 minutes ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

7 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

7 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

16 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

24 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago