ಸುಳ್ಯ: ಸುಳ್ಯ ನಗರದಲ್ಲಿ ಪದೇ ಪದೇ ಉಂಟಾಗುವ ವಿದ್ಯುತ್ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು ಎಂದು ನಗರ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು ಒತ್ತಾಯಿಸಿದ್ದಾರೆ.
ಮೆಸ್ಕಾಂ ಕಚೇರಿಗೆ ಭೇಟಿ ನೀಡಿದ ಸದಸ್ಯರ ನಿಯೋಗ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದರು. ನಿರಂತರ ವಿದ್ಯುತ್ ಕಡಿತ ದಿಂದಾಗಿ ನಗರದಲ್ಲಿ ಜನರಿಗೆ ತೀವ್ರ ತೊಂದರೆ ಉಂಟಾಗುತಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ವಿದ್ಯುತ್ ಲೈನ್ ಗಳಿಗೆ ತಾಗುವ ಮರದ ಗೆಲ್ಲುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ, ಸರೋಜಿನಿ ಪೆಲ್ತಡ್ಕ, ಶಶಿಕಲಾ ಎ., ಸುಶೀಲಾ ಜಿನ್ನಪ್ಪ, ಪ್ರವಿತಾ ಪ್ರಶಾಂತ್, ವಾಣಿಶ್ರೀ, ಶೀಲಾ ಅರುಣ ಕುರುಂಜಿ ಉಪಸ್ಥಿತರಿದ್ದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…