ಸುಳ್ಯ: ಸುಳ್ಯ ನಗರದಲ್ಲಿ ಪದೇ ಪದೇ ಉಂಟಾಗುವ ವಿದ್ಯುತ್ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು ಎಂದು ನಗರ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು ಒತ್ತಾಯಿಸಿದ್ದಾರೆ.
ಮೆಸ್ಕಾಂ ಕಚೇರಿಗೆ ಭೇಟಿ ನೀಡಿದ ಸದಸ್ಯರ ನಿಯೋಗ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದರು. ನಿರಂತರ ವಿದ್ಯುತ್ ಕಡಿತ ದಿಂದಾಗಿ ನಗರದಲ್ಲಿ ಜನರಿಗೆ ತೀವ್ರ ತೊಂದರೆ ಉಂಟಾಗುತಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ವಿದ್ಯುತ್ ಲೈನ್ ಗಳಿಗೆ ತಾಗುವ ಮರದ ಗೆಲ್ಲುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ, ಸರೋಜಿನಿ ಪೆಲ್ತಡ್ಕ, ಶಶಿಕಲಾ ಎ., ಸುಶೀಲಾ ಜಿನ್ನಪ್ಪ, ಪ್ರವಿತಾ ಪ್ರಶಾಂತ್, ವಾಣಿಶ್ರೀ, ಶೀಲಾ ಅರುಣ ಕುರುಂಜಿ ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…