Advertisement
ಸುದ್ದಿಗಳು

ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ದೊರಕಿದಲ್ಲಿ ಭಾರತ ವಿಶ್ವಗುರು – ರಾಘವೇಶ್ವರ ಶ್ರೀ

Share

ಬೆಂಗಳೂರು: ಭಾರತೀಯತೆಯ, ಭಾರತೀಯ ಸನಾತನ ಧರ್ಮ ಸಂಸ್ಕೃತಿಯ ಹಸಿವು ಇಂದು ಸಮಾಜದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಸಮಾಜಕ್ಕೆ ಈ ಹಂತದಲ್ಲಿ ಸೂಕ್ತ ಮಾರ್ಗದರ್ಶನ ದೊರಕಿದಲ್ಲಿ ಮಾತ್ರ ಭಾರತ ವಿಶ್ವಗುರುವಾಗಬಲ್ಲದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.

ಗಿರಿನಗರ ರಾಮಾಶ್ರಯದಲ್ಲಿ ಶನಿವಾರ ನಡೆದ ರಾಮಾಯಣ ಚಾತುರ್ಮಾಸ್ಯ ಸೀಮೋಲ್ಲಂಘನದ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಈ ಬಾರಿಯ ಚಾತುರ್ಮಾಸ್ಯವನ್ನು ರಾಮಾಯಣ ಚಾತುರ್ಮಾಸ್ಯವಾಗಿ ಆಚರಿಸಲಾಗಿದ್ದು, ನಿರಂತರವಾಗಿ ಧಾರಾ ರಾಮಾಯಣ ಪ್ರವಚನ ನಡೆದಿದೆ. ರಾಮಾಯಣ ಸರ್ವವೇದಗಳ ಸಾರ; ಇದು ಗುರು-ಶಿಷ್ಯರ ನಡುವಿನ ಬಾಂಧವ್ಯ ಬೆಸೆಯಲು ಸಹಕಾರಿ. ಅರುವತ್ತು ದಿನಗಳ ಕಾಲ ನಿರಂತರವಾಗಿ ನಡೆದ ಧಾರಾ ರಾಮಾಯಣ, ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆದಿದೆ ಎಂದು ಬಣ್ಣಿಸಿದರು. ಭಾರತದ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದ ವಿಶ್ವವಿದ್ಯಾಪೀಠದ ಸ್ಥಾಪನೆಗೆ ಸಂಕಲ್ಪಿಸಿ ನಡೆಸಿದ ಈ ಧಾರಾ ರಾಮಾಯಣ ಸಾರ್ಥಕವಾಗುವುದು ಶ್ರೀಸಂಕಲ್ಪ ಕೈಗೂಡಿದಾಗ ಎಂದು ಅಭಿಪ್ರಾಯಪಟ್ಟರು.

ಚಾತುರ್ಮಾಸ್ಯ ಇರುವುದೇ ಚೈತನ್ಯ ಸಂಗ್ರಹಕ್ಕೆ; ಕೇವಲ ಸನ್ಯಾಸಿಗಳಿಗೆ ಮಾತ್ರವಲ್ಲದೇ ಗೃಹಸ್ಥರಿಗೂ ಇದು ಅನ್ವಯಿಸುತ್ತದೆ. ಶಕ್ತಿಸಂಚಯನಕ್ಕೆ ಚಾತುರ್ಮಾಸ್ಯ ಪ್ರಶಸ್ತ ಕಾಲ. ಈ ಬಾರಿಯಂತೂ ವೇದಗಳ ಸಾರವಾದ ರಾಮಾಯಣದ ಮೂಲಕ ಈ ಕಾರ್ಯ ಮತ್ತಷ್ಟು ಚೆನ್ನಾಗಿ ನಡೆದಿದೆ ಎಂದು ಹೇಳಿದರು. ಚಾರ್ತುಮಾಸ್ಯ  ಸುವ್ಯವಸ್ಥಿತವಾಗಿ, ವೈಭವೋಪೇತವಾಗಿ ನಡೆದಿದೆ. ಶ್ರೀಮಠದ ಇತಿಹಾಸಲ್ಲೇ ಮೊದಲ ಬಾರಿಗೆ ಎರಡು ತಿಂಗಳ ಪರ್ಯಂತ ಶ್ರೀರಾಮದೇವರಿಗೆ ಸುವರ್ಣ ಮಂಟಪದಲ್ಲಿ ಪೂಜಾಸೇವೆ ನೆರವೇರಿತು. ಸಾವಿರಾರು ಶಿಷ್ಯಭಕ್ತರಿಗೆ ಸೇವೆ ಮಾಡುವ ಅವಕಾಶ ಲಭಿಸಿದೆ ಎಂದು ಬಣ್ಣಿಸಿದರು.

ರಾಮಚಂದ್ರ ಹೆಗಡೆ ನಿಸ್ರಾಣಿ ಅವರ ಪರವಾಗಿ ಶ್ರೀಮಠದ ಸಮ್ಮುಖ ಸರ್ವಾಧಿಕಾರಿ ಟಿ.ಮಡಿಯಾಳ್ ಚಾತುರ್ಮಾಸ್ಯ ಪ್ರಶಸ್ತಿ ಸ್ವೀಕರಿಸಿದರು.

ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ವಾದಿರಾಜ ಸಾಮಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ. ಭಟ್, ಹಿರಿಯ ಪತ್ರಕರ್ತ ವಿನಾಯಕ ಭಟ್ ಮುರೂರು, ಚಾತುರ್ಮಾಸ್ಯ ಸಮಿತಿ ಕಾರ್ಯಾಧ್ಯಕ್ಷ ರಮೇಶ್ ಹೆಗಡೆ ಕೋರಮಂಗಲ, ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ ಕಜೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಕಾರ್ಯದರ್ಶಿ ನಾಗರಾಜ ಭಟ್, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

9 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

9 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

9 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

16 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago