Advertisement
ಸುದ್ದಿಗಳು

ಸಮಾಜದ ಅಭಿವೃದ್ಧಿಗಾಗಿ ಪಯತ್ನಿಸುವ ಪ್ರತಿಯೊಬ್ಬ ವ್ಯಕ್ತಿಯು ಶಿಲ್ಪಿ: ಡಾ. ಮಂಜುನಾಥ್

Share

ಪುತ್ತೂರು: ಇಂಜಿನಿಯರ್ ಎಂಬ ವ್ಯಕ್ತಿಯನ್ನು ಕೇವಲ ವಿಷಯವನ್ನು ಆಯ್ಕೆ ಮಾಡಿ ವ್ಯಾಸಂಗ ಮಾಡುವಾತ ಎನ್ನಲು ಸಾಧ್ಯವಿಲ್ಲ. ಬದಲಾಗಿ ಎಲ್ಲರೂ ಅವರವರ ಬದುಕನ್ನು ಉತ್ತಮ ವ್ಯಕ್ತಿತ್ವದಿಂದ ಸಮಾಜದ ಅಭಿವೃದ್ಧಿಗಾಗಿ ಪ್ರಯತ್ನ ಮಾಡುವ ಪ್ರತಿಯೊಬ್ಬ ವ್ಯಕ್ತಿಯು ಶಿಲ್ಪಿ ಎನ್ನಬಹುದು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸಿ. ಕೆ. ಮಂಜುನಾಥ್ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸುವ ಮಣಿಕರ್ಣಿಕ ಮಾತುಗಾರರ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ‘ನಿಮ್ಮ ಬದುಕಿಗೆ ನೀವೇ ಶಿಲ್ಪಿ’ ಎಂಬ ವಿಷಯದ ಬಗ್ಗೆ ಗುರುವಾರ ಮಾತನಾಡಿದರು.
ಸಮಾಜದ ಏಳಿಗೆಯಲ್ಲಿ ಪತ್ರಕರ್ತನ ಪಾತ್ರ ಬಹುಮುಖ್ಯ. ಒಬ್ಬ ಉತ್ತಮ ಪತ್ರಕರ್ತನ ಲೇಖನಗಳಿಂದ ಸಮಾಜದಲ್ಲಿ ಬದಲಾವಣೆಯನ್ನು ತರಬಹುದು. ಧನಾತ್ಮಕವಾದ ಸುದ್ದಿಗಳು ಜನರಿಗೆ ತಲುಪಿದಾಗ ಸುದ್ದಿಯ ಮೌಲ್ಯವು ಹೆಚ್ಚಾಗುತ್ತದೆ. ದೇಶ ಮತ್ತು ಜನರ ಸಮಸ್ಯೆಗಳನ್ನು ಸ್ಪಂದಿಸುವುದು ಮುಖ್ಯ, ಆದುದರಿಂದ ಮುಂದಿನ ಪತ್ರಕರ್ತರು ಸದೃಢ ಸಮಾಜವನ್ನು ಕಟ್ಟಲು ಕಟಿಬದ್ಧರಾಗಿರಬೇಕು ಎಂದು ಅಭಿಪ್ರಾಯಪಟ್ಟರು.

ಉತ್ತಮ ಮಾತುಗಾರರಾಗಿ ಪ್ರಥಮ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ ತನುಶ್ರೀ ಆಯ್ಕೆಯಾದರು. ದ್ವಿತೀಯ ವರ್ಷದ ಪತ್ರಿಕೋದ್ಯಮ ತರಗತಿಯು ಉತ್ತಮ ಮಾತುಗಾರರ ತಂಡವಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳಾದ ಅನಘಾ, ರಾಮ್‍ಕಿಶನ್, ಗೌತಮ್, ಜಯಶ್ರೀ, ತನುಶ್ರೀ, ಚರಿಷ್ಮಾ, ಧನ್ಯ, ಸೌಜನ್ಯ ಅನುಭವಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯ ಪಿ.ಆರ್. ನಿಡ್ಪಳ್ಳಿ ಉಪಸ್ಥಿತರಿದ್ದರು.

ಮಣಿಕರ್ಣಿಕ ಮಾತುಗಾರರ ವೇದಿಕೆ ಕಾರ್ಯಕ್ರಮದ ಕಾರ್ಯದರ್ಶಿ ತೇಜಶ್ರೀ ಪಿ.ವಿ. ಸ್ವಾಗತಿಸಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ವಂದಿಸಿದರು. ವಿದ್ಯಾರ್ಥಿನಿ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

52 minutes ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

18 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago