ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…