ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…