ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…