ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…