ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…