Advertisement
ಸುದ್ದಿಗಳು

ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರ

Share

ಕಡಬ: ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಮಹತ್ತರ ಪಾತ್ರ ವಹಿಸುತ್ತದೆ. ಹಾಗಾಗಿ ತನ್ನ ವೀಕ್ಷಕರನ್ನು ಹೆಚ್ಚುವ ಸಲುವಾಗಿ ದಿನವಿಡಿ ನಿಷ್ಪ್ರಯೋಜಕ ಸುದ್ದಿಯನ್ನು ಬಿತ್ತರಿಸುವ ಬದಲು ಸಮಾಜದ ಅಂಕುಡೊಂಕುಗಳನ್ನು ಸ್ಥೂಲವಾಗಿ ಪರಿಚಯಿಸಿ ಧನತ್ಮಾಕ ಚಿಂತನೆಯ ಮೂಲಕ ಸಂಬಂದಪಟ್ಟವರ ಗಮನ ಸೆಳೆದು ಸಮಸ್ಯೆ ಬಗೆಹರಿಸುವ ಕಾರ್ಯವಾಗಬೇಕು  ಎಂದು ಸಾರ್ವಜನಿಕ ಶಿಕ್ಷಣ ಇಲಾಖಾ ಉಪನಿರ್ದೇಶಕ ವೈ ಶಿವರಾಮಯ್ಯ ಹೇಳಿದರು.
ಕಡಬ ಸರಸ್ವತೀ ವಿದ್ಯಾಲಯದಲ್ಲಿ ಶನಿವಾರ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಮಾತನಾಡಿ, ಪ್ರಸಕ್ತ ಕಾಲಘಟ್ಟದಲ್ಲಿ ಮಾದ್ಯಮವು ಜಾತಿ ಧರ್ಮ ರಾಜಕೀಯ ಪಕ್ಷದ ಓಲೈಕೆಗೆ ಸೀಮಿತವಾಗಿರುವುದರಿಂದ ಪರ್ತಕರ್ತನ ಘನತೆ ಕುಗ್ಗುತ್ತಿದೆ. ಆದರೂ ಪತ್ರಿಕಾ ಧರ್ಮವನ್ನು ಪರಿಪಾಲಿಸುವ ಪತ್ರಕರ್ತನಿಗೆ ಸಮಾಜದಲ್ಲಿ ಸ್ಥಾನ ಮಾನಕ್ಕೆ ಕೊರತೆಯಾಗುವುದಿಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಉಪವಿಭಾಗ ಉಪಧೀಕ್ಷಕ ದಿನಕರ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಸಮಾಜದಲ್ಲಿ ಆಶಾಂತಿ ಉಂಟಾಗುತ್ತಿದೆ. ಸಜ್ಜನರ ಮೌನವೇ ಈ ದುಸ್ಥಿಗೆ ಕಾರಣವಾಗುತ್ತಿದೆ ಎನ್ನುವ ಸತ್ಯವನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ , ಸರಸ್ವತೀ ವಿದ್ಯಾಲಯ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಶುಭಹಾರೈಸಿದರು. ಶ್ರೀನಿವಾಸ ಇಂದಾಜೆ ಮತ್ತು ವಿಜಯಲಕ್ಷ್ಮೀ ಶಿಬರೂರು ಅವರನ್ನು ಸನ್ಮಾನಿಸಲಾಯಿತು.

ಪತ್ರಕರ್ತ ಪ್ರಕಾಶ್ ಕೊಡಿಂಬಾಳ, ವಿಜಯಕುಮಾರ್ ಪೆರ್ಲ ಸನ್ಮಾನ ಪತ್ರ ವಾಚಿಸಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊೈಲ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ನಾಗರಾಜ್ ಎನ್ ಕೆ ವಂದಿಸಿದರು. ಪ್ರಾಂಶುಪಾಲ ಮಹೇಶ್ ನಿಟಲಾಪುರ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿಜಯಲಕ್ಷ್ಮೀ ಶಿಬರೂರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

17 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

19 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago