ಸುಳ್ಯ: ಮನುಷ್ಯನ ಸಂಕುಚಿತ ಭಾವನೆಗಳಿಂದ ಬೇರೆ ಬೇರೆ ಪಂಗಡಗಳಾಗಿ, ಮತಗಳಾಗಿ ಸನಾತನ ಹಿಂದೂ ಧರ್ಮಕ್ಕೆ ಮುಳ್ಳಾಗುವ ಸಂದರ್ಭದಲ್ಲಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ತನ್ನ ಜೀವನದಲ್ಲಿ ಪೂರ್ಣವಾಗಿ ಅಳವಡಿಸಿಕೊಂಡು, ಸಮಾಜವನ್ನು ತನ್ನೊಂದಿಗೆ ಸನ್ಮಾರ್ಗದಲ್ಲಿ ಮುನ್ನಡೆಸಿಕೊಂಡು ಇಡಿಯ ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು ಎಂದು ವೇ| ಮೂ| ಅಭಿರಾಮ ಶರ್ಮಾ ಹೇಳಿದರು.
ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಶ್ರೀ ಶಂಕರ ಜಯಂತಿ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಮಾತನಾಡಿದರು.
ಸಭಾಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ್ ರಾವ್ ‘ಸಾವಿರದ ಇನ್ನೂರು ವರುಷದ ಹಿಂದೆ ಜನಿಸಿದ್ದ ಶ್ರೀ ಶಂಕರ ಭಗವತ್ಪಾದರನ್ನು ನಾವು ಇನ್ನೂ ಪ್ರಾತಸ್ಪರಣೆ ಮಾಡುತ್ತೇವೆಂದರೆ ಅವರ ಸಾಧನೆ ಅಪಾರ. ಇಂದು ನಾವು ನೀವು ವೇದ, ಸನಾತನ ಹಿಂದೂ ಧರ್ಮದ ಆಚರಣೆಗಳನ್ನು ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಶಂಕರರ ಕೊಡುಗೆ ಅಪಾರ’ ಎಂದರು.
ಗೀತಾಲಕ್ಷ್ಮೀ ಕಂಬಾರು ಶಂಕರಾಚಾರ್ಯರ ಜೀವನಚರಿತ್ರೆಯ ಕುರಿತು ಉಪನ್ಯಾಸ ನೀಡಿದರು.
ವೇ| ಮೂ| ಸುದರ್ಶನ ಶರ್ಮ ಶುಭಹಾರೈಸಿದರು. ವೇದಿಕೆಯಲ್ಲಿ ವೇ| ಮೂ| ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಆಶ್ರಿತರಾಮ ಶರ್ಮಾ, ವೇ| ಮೂ| ಪ್ರಕಾಶ ಬಲಿಪ ಉಪಸ್ಥಿತರಿದ್ದರು. ಶಂಕರಜಯಂತಿ ಅಂಗವಾಗಿ ಶಿಬಿರಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವೇ| ಮೂ| ಪುರೋಹಿತ ನಾಗರಾಜ ಭಟ್ ಸ್ವಾಗತಿಸಿ, ವೇ| ಮೂ| ಪ್ರಕಾಶ ಬಲಿಪ ವಂದನಾರ್ಪಣೆ ನಡೆಸಿದರು. ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…