ಧಾರ್ಮಿಕ

ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಮನುಷ್ಯನ ಸಂಕುಚಿತ ಭಾವನೆಗಳಿಂದ ಬೇರೆ ಬೇರೆ ಪಂಗಡಗಳಾಗಿ, ಮತಗಳಾಗಿ ಸನಾತನ ಹಿಂದೂ ಧರ್ಮಕ್ಕೆ ಮುಳ್ಳಾಗುವ ಸಂದರ್ಭದಲ್ಲಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ತನ್ನ ಜೀವನದಲ್ಲಿ ಪೂರ್ಣವಾಗಿ ಅಳವಡಿಸಿಕೊಂಡು, ಸಮಾಜವನ್ನು ತನ್ನೊಂದಿಗೆ ಸನ್ಮಾರ್ಗದಲ್ಲಿ ಮುನ್ನಡೆಸಿಕೊಂಡು ಇಡಿಯ ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು ಎಂದು ವೇ| ಮೂ| ಅಭಿರಾಮ ಶರ್ಮಾ ಹೇಳಿದರು.

Advertisement

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಶ್ರೀ ಶಂಕರ ಜಯಂತಿ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಮಾತನಾಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ್ ರಾವ್ ‘ಸಾವಿರದ ಇನ್ನೂರು ವರುಷದ ಹಿಂದೆ ಜನಿಸಿದ್ದ ಶ್ರೀ ಶಂಕರ ಭಗವತ್ಪಾದರನ್ನು ನಾವು ಇನ್ನೂ ಪ್ರಾತಸ್ಪರಣೆ ಮಾಡುತ್ತೇವೆಂದರೆ ಅವರ ಸಾಧನೆ ಅಪಾರ. ಇಂದು ನಾವು ನೀವು ವೇದ, ಸನಾತನ ಹಿಂದೂ ಧರ್ಮದ ಆಚರಣೆಗಳನ್ನು ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಶಂಕರರ ಕೊಡುಗೆ ಅಪಾರ’ ಎಂದರು.

ಗೀತಾಲಕ್ಷ್ಮೀ ಕಂಬಾರು ಶಂಕರಾಚಾರ್ಯರ ಜೀವನಚರಿತ್ರೆಯ ಕುರಿತು ಉಪನ್ಯಾಸ ನೀಡಿದರು.

Advertisement

ವೇ| ಮೂ| ಸುದರ್ಶನ ಶರ್ಮ ಶುಭಹಾರೈಸಿದರು. ವೇದಿಕೆಯಲ್ಲಿ ವೇ| ಮೂ| ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಆಶ್ರಿತರಾಮ ಶರ್ಮಾ, ವೇ| ಮೂ| ಪ್ರಕಾಶ ಬಲಿಪ ಉಪಸ್ಥಿತರಿದ್ದರು. ಶಂಕರಜಯಂತಿ ಅಂಗವಾಗಿ ಶಿಬಿರಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Advertisement

ವೇ| ಮೂ| ಪುರೋಹಿತ ನಾಗರಾಜ ಭಟ್ ಸ್ವಾಗತಿಸಿ, ವೇ| ಮೂ| ಪ್ರಕಾಶ ಬಲಿಪ ವಂದನಾರ್ಪಣೆ ನಡೆಸಿದರು. ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

4 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

4 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

4 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

1 day ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago