Advertisement
ಧಾರ್ಮಿಕ

ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು

Share

ಸುಳ್ಯ: ಮನುಷ್ಯನ ಸಂಕುಚಿತ ಭಾವನೆಗಳಿಂದ ಬೇರೆ ಬೇರೆ ಪಂಗಡಗಳಾಗಿ, ಮತಗಳಾಗಿ ಸನಾತನ ಹಿಂದೂ ಧರ್ಮಕ್ಕೆ ಮುಳ್ಳಾಗುವ ಸಂದರ್ಭದಲ್ಲಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ತನ್ನ ಜೀವನದಲ್ಲಿ ಪೂರ್ಣವಾಗಿ ಅಳವಡಿಸಿಕೊಂಡು, ಸಮಾಜವನ್ನು ತನ್ನೊಂದಿಗೆ ಸನ್ಮಾರ್ಗದಲ್ಲಿ ಮುನ್ನಡೆಸಿಕೊಂಡು ಇಡಿಯ ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು ಎಂದು ವೇ| ಮೂ| ಅಭಿರಾಮ ಶರ್ಮಾ ಹೇಳಿದರು.

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಶ್ರೀ ಶಂಕರ ಜಯಂತಿ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಮಾತನಾಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ್ ರಾವ್ ‘ಸಾವಿರದ ಇನ್ನೂರು ವರುಷದ ಹಿಂದೆ ಜನಿಸಿದ್ದ ಶ್ರೀ ಶಂಕರ ಭಗವತ್ಪಾದರನ್ನು ನಾವು ಇನ್ನೂ ಪ್ರಾತಸ್ಪರಣೆ ಮಾಡುತ್ತೇವೆಂದರೆ ಅವರ ಸಾಧನೆ ಅಪಾರ. ಇಂದು ನಾವು ನೀವು ವೇದ, ಸನಾತನ ಹಿಂದೂ ಧರ್ಮದ ಆಚರಣೆಗಳನ್ನು ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಶಂಕರರ ಕೊಡುಗೆ ಅಪಾರ’ ಎಂದರು.

ಗೀತಾಲಕ್ಷ್ಮೀ ಕಂಬಾರು ಶಂಕರಾಚಾರ್ಯರ ಜೀವನಚರಿತ್ರೆಯ ಕುರಿತು ಉಪನ್ಯಾಸ ನೀಡಿದರು.

ವೇ| ಮೂ| ಸುದರ್ಶನ ಶರ್ಮ ಶುಭಹಾರೈಸಿದರು. ವೇದಿಕೆಯಲ್ಲಿ ವೇ| ಮೂ| ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಆಶ್ರಿತರಾಮ ಶರ್ಮಾ, ವೇ| ಮೂ| ಪ್ರಕಾಶ ಬಲಿಪ ಉಪಸ್ಥಿತರಿದ್ದರು. ಶಂಕರಜಯಂತಿ ಅಂಗವಾಗಿ ಶಿಬಿರಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇ| ಮೂ| ಪುರೋಹಿತ ನಾಗರಾಜ ಭಟ್ ಸ್ವಾಗತಿಸಿ, ವೇ| ಮೂ| ಪ್ರಕಾಶ ಬಲಿಪ ವಂದನಾರ್ಪಣೆ ನಡೆಸಿದರು. ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

12 minutes ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

51 minutes ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

14 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

14 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

24 hours ago