ಸುಳ್ಯ: ಮನುಷ್ಯನ ಸಂಕುಚಿತ ಭಾವನೆಗಳಿಂದ ಬೇರೆ ಬೇರೆ ಪಂಗಡಗಳಾಗಿ, ಮತಗಳಾಗಿ ಸನಾತನ ಹಿಂದೂ ಧರ್ಮಕ್ಕೆ ಮುಳ್ಳಾಗುವ ಸಂದರ್ಭದಲ್ಲಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ತನ್ನ ಜೀವನದಲ್ಲಿ ಪೂರ್ಣವಾಗಿ ಅಳವಡಿಸಿಕೊಂಡು, ಸಮಾಜವನ್ನು ತನ್ನೊಂದಿಗೆ ಸನ್ಮಾರ್ಗದಲ್ಲಿ ಮುನ್ನಡೆಸಿಕೊಂಡು ಇಡಿಯ ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು ಎಂದು ವೇ| ಮೂ| ಅಭಿರಾಮ ಶರ್ಮಾ ಹೇಳಿದರು.
ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಶ್ರೀ ಶಂಕರ ಜಯಂತಿ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಮಾತನಾಡಿದರು.
ಸಭಾಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ್ ರಾವ್ ‘ಸಾವಿರದ ಇನ್ನೂರು ವರುಷದ ಹಿಂದೆ ಜನಿಸಿದ್ದ ಶ್ರೀ ಶಂಕರ ಭಗವತ್ಪಾದರನ್ನು ನಾವು ಇನ್ನೂ ಪ್ರಾತಸ್ಪರಣೆ ಮಾಡುತ್ತೇವೆಂದರೆ ಅವರ ಸಾಧನೆ ಅಪಾರ. ಇಂದು ನಾವು ನೀವು ವೇದ, ಸನಾತನ ಹಿಂದೂ ಧರ್ಮದ ಆಚರಣೆಗಳನ್ನು ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಶಂಕರರ ಕೊಡುಗೆ ಅಪಾರ’ ಎಂದರು.
ಗೀತಾಲಕ್ಷ್ಮೀ ಕಂಬಾರು ಶಂಕರಾಚಾರ್ಯರ ಜೀವನಚರಿತ್ರೆಯ ಕುರಿತು ಉಪನ್ಯಾಸ ನೀಡಿದರು.
ವೇ| ಮೂ| ಸುದರ್ಶನ ಶರ್ಮ ಶುಭಹಾರೈಸಿದರು. ವೇದಿಕೆಯಲ್ಲಿ ವೇ| ಮೂ| ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಆಶ್ರಿತರಾಮ ಶರ್ಮಾ, ವೇ| ಮೂ| ಪ್ರಕಾಶ ಬಲಿಪ ಉಪಸ್ಥಿತರಿದ್ದರು. ಶಂಕರಜಯಂತಿ ಅಂಗವಾಗಿ ಶಿಬಿರಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವೇ| ಮೂ| ಪುರೋಹಿತ ನಾಗರಾಜ ಭಟ್ ಸ್ವಾಗತಿಸಿ, ವೇ| ಮೂ| ಪ್ರಕಾಶ ಬಲಿಪ ವಂದನಾರ್ಪಣೆ ನಡೆಸಿದರು. ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…