Advertisement
ಧಾರ್ಮಿಕ

ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು

Share

ಸುಳ್ಯ: ಮನುಷ್ಯನ ಸಂಕುಚಿತ ಭಾವನೆಗಳಿಂದ ಬೇರೆ ಬೇರೆ ಪಂಗಡಗಳಾಗಿ, ಮತಗಳಾಗಿ ಸನಾತನ ಹಿಂದೂ ಧರ್ಮಕ್ಕೆ ಮುಳ್ಳಾಗುವ ಸಂದರ್ಭದಲ್ಲಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ತನ್ನ ಜೀವನದಲ್ಲಿ ಪೂರ್ಣವಾಗಿ ಅಳವಡಿಸಿಕೊಂಡು, ಸಮಾಜವನ್ನು ತನ್ನೊಂದಿಗೆ ಸನ್ಮಾರ್ಗದಲ್ಲಿ ಮುನ್ನಡೆಸಿಕೊಂಡು ಇಡಿಯ ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು ಎಂದು ವೇ| ಮೂ| ಅಭಿರಾಮ ಶರ್ಮಾ ಹೇಳಿದರು.

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಶ್ರೀ ಶಂಕರ ಜಯಂತಿ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಮಾತನಾಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ್ ರಾವ್ ‘ಸಾವಿರದ ಇನ್ನೂರು ವರುಷದ ಹಿಂದೆ ಜನಿಸಿದ್ದ ಶ್ರೀ ಶಂಕರ ಭಗವತ್ಪಾದರನ್ನು ನಾವು ಇನ್ನೂ ಪ್ರಾತಸ್ಪರಣೆ ಮಾಡುತ್ತೇವೆಂದರೆ ಅವರ ಸಾಧನೆ ಅಪಾರ. ಇಂದು ನಾವು ನೀವು ವೇದ, ಸನಾತನ ಹಿಂದೂ ಧರ್ಮದ ಆಚರಣೆಗಳನ್ನು ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಶಂಕರರ ಕೊಡುಗೆ ಅಪಾರ’ ಎಂದರು.

ಗೀತಾಲಕ್ಷ್ಮೀ ಕಂಬಾರು ಶಂಕರಾಚಾರ್ಯರ ಜೀವನಚರಿತ್ರೆಯ ಕುರಿತು ಉಪನ್ಯಾಸ ನೀಡಿದರು.

ವೇ| ಮೂ| ಸುದರ್ಶನ ಶರ್ಮ ಶುಭಹಾರೈಸಿದರು. ವೇದಿಕೆಯಲ್ಲಿ ವೇ| ಮೂ| ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಆಶ್ರಿತರಾಮ ಶರ್ಮಾ, ವೇ| ಮೂ| ಪ್ರಕಾಶ ಬಲಿಪ ಉಪಸ್ಥಿತರಿದ್ದರು. ಶಂಕರಜಯಂತಿ ಅಂಗವಾಗಿ ಶಿಬಿರಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇ| ಮೂ| ಪುರೋಹಿತ ನಾಗರಾಜ ಭಟ್ ಸ್ವಾಗತಿಸಿ, ವೇ| ಮೂ| ಪ್ರಕಾಶ ಬಲಿಪ ವಂದನಾರ್ಪಣೆ ನಡೆಸಿದರು. ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago