Advertisement
ಧಾರ್ಮಿಕ

ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು

Share

ಸುಳ್ಯ: ಮನುಷ್ಯನ ಸಂಕುಚಿತ ಭಾವನೆಗಳಿಂದ ಬೇರೆ ಬೇರೆ ಪಂಗಡಗಳಾಗಿ, ಮತಗಳಾಗಿ ಸನಾತನ ಹಿಂದೂ ಧರ್ಮಕ್ಕೆ ಮುಳ್ಳಾಗುವ ಸಂದರ್ಭದಲ್ಲಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿ, ತನ್ನ ಜೀವನದಲ್ಲಿ ಪೂರ್ಣವಾಗಿ ಅಳವಡಿಸಿಕೊಂಡು, ಸಮಾಜವನ್ನು ತನ್ನೊಂದಿಗೆ ಸನ್ಮಾರ್ಗದಲ್ಲಿ ಮುನ್ನಡೆಸಿಕೊಂಡು ಇಡಿಯ ಸಮಾಜವನ್ನು ಅಖಂಡ ಮತ್ತು ಅದ್ವೈತವಾಗಿಸಿ ಶ್ರೀಶಂಕರರು ಜಗದ್ಗುರುಗಳಾದರು ಎಂದು ವೇ| ಮೂ| ಅಭಿರಾಮ ಶರ್ಮಾ ಹೇಳಿದರು.

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಶ್ರೀ ಶಂಕರ ಜಯಂತಿ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಮಾತನಾಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ್ ರಾವ್ ‘ಸಾವಿರದ ಇನ್ನೂರು ವರುಷದ ಹಿಂದೆ ಜನಿಸಿದ್ದ ಶ್ರೀ ಶಂಕರ ಭಗವತ್ಪಾದರನ್ನು ನಾವು ಇನ್ನೂ ಪ್ರಾತಸ್ಪರಣೆ ಮಾಡುತ್ತೇವೆಂದರೆ ಅವರ ಸಾಧನೆ ಅಪಾರ. ಇಂದು ನಾವು ನೀವು ವೇದ, ಸನಾತನ ಹಿಂದೂ ಧರ್ಮದ ಆಚರಣೆಗಳನ್ನು ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಶಂಕರರ ಕೊಡುಗೆ ಅಪಾರ’ ಎಂದರು.

ಗೀತಾಲಕ್ಷ್ಮೀ ಕಂಬಾರು ಶಂಕರಾಚಾರ್ಯರ ಜೀವನಚರಿತ್ರೆಯ ಕುರಿತು ಉಪನ್ಯಾಸ ನೀಡಿದರು.

ವೇ| ಮೂ| ಸುದರ್ಶನ ಶರ್ಮ ಶುಭಹಾರೈಸಿದರು. ವೇದಿಕೆಯಲ್ಲಿ ವೇ| ಮೂ| ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಆಶ್ರಿತರಾಮ ಶರ್ಮಾ, ವೇ| ಮೂ| ಪ್ರಕಾಶ ಬಲಿಪ ಉಪಸ್ಥಿತರಿದ್ದರು. ಶಂಕರಜಯಂತಿ ಅಂಗವಾಗಿ ಶಿಬಿರಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇ| ಮೂ| ಪುರೋಹಿತ ನಾಗರಾಜ ಭಟ್ ಸ್ವಾಗತಿಸಿ, ವೇ| ಮೂ| ಪ್ರಕಾಶ ಬಲಿಪ ವಂದನಾರ್ಪಣೆ ನಡೆಸಿದರು. ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 hour ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

2 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

4 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

5 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

18 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago