ಧರ್ಮಸ್ಥಳ: ಶಿವನನ್ನು ಲಯಕರ್ತ ಎಂದು ಕರೆಯುತ್ತಾರೆ. ಸೃಷ್ಠಿಯಲ್ಲಿ ಎಲ್ಲವೂ ಆದಿಯಿಂದ ಅಂತ್ಯದೆಡೆಗೆ ಹೋಗುತ್ತದೆ. ಶಾಶ್ವತವಾಗಿ ಈ ಪ್ರಪಂಚದಲ್ಲಿ ಯಾವುದೇ ಚರಾಚರ ವಸ್ತುಗಳು ಇರಲು ಸಾಧ್ಯವಿಲ್ಲ. ಎಲ್ಲವೂ ನಾಶವಾಗುವುದು ಸ್ವಾಭಾವಿಕ, ಇದು ಶಿವನ ತತ್ವ. ಪ್ರಪಂಚದಲ್ಲಿ ನಾನಾ ಧರ್ಮಗಳು ಚಾಲ್ತಿಯಲ್ಲಿದೆ. ಆದರೆ ಎಲ್ಲಾ ಧರ್ಮಗಳ ತಾತ್ಪರ್ಯವು ಮಾನವೀಯತೆ ಆಗಿದೆ. ಆದ ರೆಜನರು ಧರ್ಮವನ್ನು ಅರ್ಥೈಸಿಕೊಳ್ಳುವುದರಲ್ಲಿ ವ್ಯತ್ಯಾಸವಾಗುವ ಕಾರಣ ಧಾರ್ಮಿಕ ಕ್ಲೇಶಗಳು ಸಮಾಜದಲ್ಲಿ ಉಂಟಾಗುತ್ತದೆ. ಧಾರ್ಮಿಕ ಮುಖಂಡರುಗಳು ಈ ವ್ಯತ್ಯಾಸಗಳನ್ನು ಹೊಗಲಾಡಿಸಲು ಪ್ರಯತ್ನಿಸಬೇಕಾಗಿದೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ‘ ದಿ ಯುನೈಡೆಡ್ ಮೆಥೊಡಿನಸ್ಸ್ ಚರ್ಚ್’ ವತಿಯಿಂದ ಶ್ರೀಕ್ಷೇತ್ರಕ್ಕೆ ಅಮೇರಿಕಾದಿಂದ ಬಂದಂತಹ ವಿದ್ಯಾರ್ಥಿಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳವು ನಡೆಸುತ್ತಿರುವ ಜನಕಲ್ಯಾಣ ಕಾರ್ಯಕ್ರಮಗಳ ಅಧ್ಯಯನಕ್ಕೆ ಈ ತಂಡವು ಆಗಮಿಸಿತ್ತು. ಶ್ರೀ ಕ್ಷೇತ್ರದ ವಿವಿಧ ವ್ಯವಸ್ಥೆಗಳನ್ನು ಅಧ್ಯಯನ ಮಾಡಿದರು. ತಂಡದಲ್ಲಿ ಡಾ. ಇ.ವಿ.ಎಸ್ ಮಾಬೆನ್, ಪ್ರೊಫೆಸರ್, ಎ.ಜೆ. ಇನ್ಸ್ಟ್ಯೂಟ್ ಆಫ್ ಮೆಡಿಕಲ್ ಕಲಾ ಸಾಯನ್ಸ್, ಬಿಷಬ್ ಸುದರ್ಶನ್ ದೇವಾಧಾರ್, ಮೆಥೋಡಿಸ್ಟ್ ಚರ್ಚ್, ನ್ಯೂ ಇಂಗ್ಲೆಂಡ್ ಕಾನ್ಪರೆಸ್ಸ್, ಬಿಷಬ್ ಈಸ್ಟರ್ಲಿಂಗ್ , ಟೆಡ್ಆಂಡರ್ಸನ್ ಮತ್ತು ಮೇರಿ ಆಂಡರ್ಸನ್ ಇವರು ವಿದ್ಯಾರ್ಥಿಗಳ ತಂಡವನ್ನು ಪ್ರತಿನಿಧಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…