Advertisement
Political mirror

ಸರಕಾರದಿಂದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಕಡೆಗಣನೆ- ಕೋಟ ಶ್ರೀನಿವಾಸ ಪೂಜಾರಿ ಆರೋಪ

Share

ಸುಳ್ಯ: ರಾಜ್ಯದಲ್ಲಿರುವ ನಗರ ಸ್ಥಳೀಯಾಡಳಿತ ಸಂಸ್ಥೆಗಳನ್ನು ರಾಜ್ಯ ಸರಕಾರ ಸಂಪೂರ್ಣ ಕಡೆಗಣಿಸಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಯಡಿಯೂರಪ್ಪ ಸರ್ಕಾರ ಇದ್ದ ಸಂದರ್ಭದಲ್ಲಿ ಪ್ರತಿ ನಗರ ಪಂಚಾಯತ್ ಗಳಿಗೆ ಅಭಿವೃದ್ಧಿಗೆ 5 ಕೋಟಿ ವಿಶೇಷ ಅನುದಾನ ನೀಡಿತ್ತು. ಆದರೆ ಸಿದ್ಧರಾಮಯ್ಯ ಮತ್ತು ಕುಮಾರಸ್ವಾಮಿ ಸರಕಾರ ಯಾವುದೇ ಅನುದಾನ ನೀಡದೆ ಕಡೆಗಣಿಸಿದೆ. ಇದು ನಗರಗಳ ಅಭಿವೃದ್ಧಿಗೆ ತೊಡಕಾಗಿದೆ. 109 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಎಂಟು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಸಲು ಸರಕಾರ ಕ್ರ‌ಮ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರಕಾರ ಜೀವಂತವಾಗಿ ಇದೆಯೇ ಎಂಬ ಸಂಶಯ ಮೂಡುತಿದೆ. ನಗರಾಡಳಿತವನ್ನು ನಿರ್ವಹಿಸುವುದರಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಹೇಳಿದರು.
ಮೈತ್ರಿ ಸರ್ಕಾರ ರೂಪಿಸಿದ್ದಕ್ಕೆ ಕಾಂಗ್ರೆಸ್ ಈಗ ಪಶ್ಚಾತ್ತಾಪ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದ ಅವರು ಎರಡೂ ಪಕ್ಷಗಳ ನಾಯಕರಲ್ಲಿ ಇರುವ ಅಸಮಾಧಾನದಿಂದ ರಾಜ್ಯ ಸರಕಾರ ಕೆಲವೇ ದಿನದಲ್ಲಿ ಪತನಗೊಳ್ಳಲಿದೆ ಎಂದರು. ರೋಷನ್ ಬೇಗ್ ಬಿಜೆಪಿಗೆ ಬಂದರೆ ನಾವು ಖುಷಿ ಪಡುತ್ತೇವೆ. ರೋಷನ್ ಬೇಗ್ ಪಕ್ಷಕ್ಕೆ ಬರುತ್ತಾರಾ ಎಂಬುದನ್ನು ಅವರು ನಿರ್ಧರಿಸಬೇಕು‌. ಅವರು ಬರುವುದಾದರೆ ಅವರ ಸೇರ್ಪಡೆ ಬಗ್ಗೆ ರಾಜ್ಯ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago