Advertisement
Political mirror

ಸರಕಾರದಿಂದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಕಡೆಗಣನೆ- ಕೋಟ ಶ್ರೀನಿವಾಸ ಪೂಜಾರಿ ಆರೋಪ

Share

ಸುಳ್ಯ: ರಾಜ್ಯದಲ್ಲಿರುವ ನಗರ ಸ್ಥಳೀಯಾಡಳಿತ ಸಂಸ್ಥೆಗಳನ್ನು ರಾಜ್ಯ ಸರಕಾರ ಸಂಪೂರ್ಣ ಕಡೆಗಣಿಸಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಯಡಿಯೂರಪ್ಪ ಸರ್ಕಾರ ಇದ್ದ ಸಂದರ್ಭದಲ್ಲಿ ಪ್ರತಿ ನಗರ ಪಂಚಾಯತ್ ಗಳಿಗೆ ಅಭಿವೃದ್ಧಿಗೆ 5 ಕೋಟಿ ವಿಶೇಷ ಅನುದಾನ ನೀಡಿತ್ತು. ಆದರೆ ಸಿದ್ಧರಾಮಯ್ಯ ಮತ್ತು ಕುಮಾರಸ್ವಾಮಿ ಸರಕಾರ ಯಾವುದೇ ಅನುದಾನ ನೀಡದೆ ಕಡೆಗಣಿಸಿದೆ. ಇದು ನಗರಗಳ ಅಭಿವೃದ್ಧಿಗೆ ತೊಡಕಾಗಿದೆ. 109 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಎಂಟು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಸಲು ಸರಕಾರ ಕ್ರ‌ಮ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರಕಾರ ಜೀವಂತವಾಗಿ ಇದೆಯೇ ಎಂಬ ಸಂಶಯ ಮೂಡುತಿದೆ. ನಗರಾಡಳಿತವನ್ನು ನಿರ್ವಹಿಸುವುದರಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಹೇಳಿದರು.
ಮೈತ್ರಿ ಸರ್ಕಾರ ರೂಪಿಸಿದ್ದಕ್ಕೆ ಕಾಂಗ್ರೆಸ್ ಈಗ ಪಶ್ಚಾತ್ತಾಪ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದ ಅವರು ಎರಡೂ ಪಕ್ಷಗಳ ನಾಯಕರಲ್ಲಿ ಇರುವ ಅಸಮಾಧಾನದಿಂದ ರಾಜ್ಯ ಸರಕಾರ ಕೆಲವೇ ದಿನದಲ್ಲಿ ಪತನಗೊಳ್ಳಲಿದೆ ಎಂದರು. ರೋಷನ್ ಬೇಗ್ ಬಿಜೆಪಿಗೆ ಬಂದರೆ ನಾವು ಖುಷಿ ಪಡುತ್ತೇವೆ. ರೋಷನ್ ಬೇಗ್ ಪಕ್ಷಕ್ಕೆ ಬರುತ್ತಾರಾ ಎಂಬುದನ್ನು ಅವರು ನಿರ್ಧರಿಸಬೇಕು‌. ಅವರು ಬರುವುದಾದರೆ ಅವರ ಸೇರ್ಪಡೆ ಬಗ್ಗೆ ರಾಜ್ಯ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

2 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

5 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

9 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago