Advertisement
Political mirror

ಸರಕಾರದಿಂದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಕಡೆಗಣನೆ- ಕೋಟ ಶ್ರೀನಿವಾಸ ಪೂಜಾರಿ ಆರೋಪ

Share

ಸುಳ್ಯ: ರಾಜ್ಯದಲ್ಲಿರುವ ನಗರ ಸ್ಥಳೀಯಾಡಳಿತ ಸಂಸ್ಥೆಗಳನ್ನು ರಾಜ್ಯ ಸರಕಾರ ಸಂಪೂರ್ಣ ಕಡೆಗಣಿಸಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಯಡಿಯೂರಪ್ಪ ಸರ್ಕಾರ ಇದ್ದ ಸಂದರ್ಭದಲ್ಲಿ ಪ್ರತಿ ನಗರ ಪಂಚಾಯತ್ ಗಳಿಗೆ ಅಭಿವೃದ್ಧಿಗೆ 5 ಕೋಟಿ ವಿಶೇಷ ಅನುದಾನ ನೀಡಿತ್ತು. ಆದರೆ ಸಿದ್ಧರಾಮಯ್ಯ ಮತ್ತು ಕುಮಾರಸ್ವಾಮಿ ಸರಕಾರ ಯಾವುದೇ ಅನುದಾನ ನೀಡದೆ ಕಡೆಗಣಿಸಿದೆ. ಇದು ನಗರಗಳ ಅಭಿವೃದ್ಧಿಗೆ ತೊಡಕಾಗಿದೆ. 109 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಎಂಟು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಸಲು ಸರಕಾರ ಕ್ರ‌ಮ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರಕಾರ ಜೀವಂತವಾಗಿ ಇದೆಯೇ ಎಂಬ ಸಂಶಯ ಮೂಡುತಿದೆ. ನಗರಾಡಳಿತವನ್ನು ನಿರ್ವಹಿಸುವುದರಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಹೇಳಿದರು.
ಮೈತ್ರಿ ಸರ್ಕಾರ ರೂಪಿಸಿದ್ದಕ್ಕೆ ಕಾಂಗ್ರೆಸ್ ಈಗ ಪಶ್ಚಾತ್ತಾಪ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದ ಅವರು ಎರಡೂ ಪಕ್ಷಗಳ ನಾಯಕರಲ್ಲಿ ಇರುವ ಅಸಮಾಧಾನದಿಂದ ರಾಜ್ಯ ಸರಕಾರ ಕೆಲವೇ ದಿನದಲ್ಲಿ ಪತನಗೊಳ್ಳಲಿದೆ ಎಂದರು. ರೋಷನ್ ಬೇಗ್ ಬಿಜೆಪಿಗೆ ಬಂದರೆ ನಾವು ಖುಷಿ ಪಡುತ್ತೇವೆ. ರೋಷನ್ ಬೇಗ್ ಪಕ್ಷಕ್ಕೆ ಬರುತ್ತಾರಾ ಎಂಬುದನ್ನು ಅವರು ನಿರ್ಧರಿಸಬೇಕು‌. ಅವರು ಬರುವುದಾದರೆ ಅವರ ಸೇರ್ಪಡೆ ಬಗ್ಗೆ ರಾಜ್ಯ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

6 hours ago

ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ

ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…

6 hours ago

ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ

ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…

6 hours ago

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!

ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…

10 hours ago

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…

11 hours ago

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

11 hours ago