ಕೊಡಗು ಚೆಂಬು:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗಾಂಧೀಜಯಂತಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆ. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಕುರಿತು ಪ್ರತಿಜ್ಞಾ ವಿಧಿ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಸಭಾ,ಕಾರ್ಯಕ್ರಮದಲ್ಲಿ ಗ್ರಾ.ಪಂ. ಚೆಂಬು ಇದರ ಅಧ್ಯಕ್ಷರಾದ ಶ್ರೀಯುತ ದಿನೇಶ್ ಕುಮಾರ್ ಮಾತನಾಡಿ “ದೇಶ ಕಂಡ ಮಹಾನ್ ಕಣ್ಮಣಿಗಳಾದ ಈ ಇಬ್ಬರ ಆದರ್ಶ ತತ್ವ”ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾತನಾಡಿದರು. ಹಾಗೆಯೇ ವಿದ್ಯಾಭಿಮಾನಿಗಳಾದ ಶ್ರೀಯುತ ವಾಸುದೇವ ನಿಡಿಂಜಿ ಮಾತನಾಡಿ ” ಈ ಮಹಾನ್ ವ್ಯಕ್ತಿಗಳ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಅವರ ಧ್ಯೇಯ ವಾಕ್ಯಗಳೊಂದಿಗೆ ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ನಾವೆಲ್ಲಾರು ಪಾಲ್ಗೊಳ್ಳೋಣ” ಎಂದು ಹಿತನುಡಿದರು.
ಸಭೆಯಲ್ಲಿ ಎಸ್.ಡಿ.ಎಂ ಸಿ ಅಧ್ಯಕ್ಷರು ಶ್ರೀಯುತ ಗಣೇಶ ಪಿ.ಟಿ. , ಗ್ರಾ.ಪಂ.ಚೆಂಬು ಸದಸ್ಯೆ ಶ್ರೀಮತಿ ಲೀಲಾವತಿ ಯು.ಆರ್, ಮುಖ್ಯೋಪಾಧ್ಯಾಯರಾದ ಶ್ರೀಯುತ ಸೋಮಣ್ಣ ಕೆ.ಆರ್ ಹಾಗೂ ಎಸ್.ಡಿ.ಎಂ.ಸಿ. ಸರ್ವ ಸದಸ್ಯರುಗಳು, ಶಾಲಾ ಶಿಕ್ಷಕ-ಸಿಬ್ಬಂಧಿ ವೃಂಧ ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛ ಭಾರತ – ಗಾಂಧೀ ಕನಸಿನ ಅಂಗವಾಗಿ ಶಾಲೆಯ ಸುತ್ತಾ ಮುತ್ತಾ ಶ್ರಮದಾನ ಕಾರ್ಯವನ್ನು ಮಾಡಲಾಯಿತು. ಕಾರ್ಯಕ್ರಮವನ್ನು ಶ್ರೀ ವಿಕ್ರಾಂತ ಎಂ ಬಿ ಅ.ಶಿಕ್ಷಕರು ಸ್ವಾಗತಿಸಿ ನಿರೂಪಿಸಿದರು.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…