ಕೊಡಗು ಚೆಂಬು:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗಾಂಧೀಜಯಂತಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆ. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಕುರಿತು ಪ್ರತಿಜ್ಞಾ ವಿಧಿ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಸಭಾ,ಕಾರ್ಯಕ್ರಮದಲ್ಲಿ ಗ್ರಾ.ಪಂ. ಚೆಂಬು ಇದರ ಅಧ್ಯಕ್ಷರಾದ ಶ್ರೀಯುತ ದಿನೇಶ್ ಕುಮಾರ್ ಮಾತನಾಡಿ “ದೇಶ ಕಂಡ ಮಹಾನ್ ಕಣ್ಮಣಿಗಳಾದ ಈ ಇಬ್ಬರ ಆದರ್ಶ ತತ್ವ”ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾತನಾಡಿದರು. ಹಾಗೆಯೇ ವಿದ್ಯಾಭಿಮಾನಿಗಳಾದ ಶ್ರೀಯುತ ವಾಸುದೇವ ನಿಡಿಂಜಿ ಮಾತನಾಡಿ ” ಈ ಮಹಾನ್ ವ್ಯಕ್ತಿಗಳ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಅವರ ಧ್ಯೇಯ ವಾಕ್ಯಗಳೊಂದಿಗೆ ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ನಾವೆಲ್ಲಾರು ಪಾಲ್ಗೊಳ್ಳೋಣ” ಎಂದು ಹಿತನುಡಿದರು.
ಸಭೆಯಲ್ಲಿ ಎಸ್.ಡಿ.ಎಂ ಸಿ ಅಧ್ಯಕ್ಷರು ಶ್ರೀಯುತ ಗಣೇಶ ಪಿ.ಟಿ. , ಗ್ರಾ.ಪಂ.ಚೆಂಬು ಸದಸ್ಯೆ ಶ್ರೀಮತಿ ಲೀಲಾವತಿ ಯು.ಆರ್, ಮುಖ್ಯೋಪಾಧ್ಯಾಯರಾದ ಶ್ರೀಯುತ ಸೋಮಣ್ಣ ಕೆ.ಆರ್ ಹಾಗೂ ಎಸ್.ಡಿ.ಎಂ.ಸಿ. ಸರ್ವ ಸದಸ್ಯರುಗಳು, ಶಾಲಾ ಶಿಕ್ಷಕ-ಸಿಬ್ಬಂಧಿ ವೃಂಧ ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛ ಭಾರತ – ಗಾಂಧೀ ಕನಸಿನ ಅಂಗವಾಗಿ ಶಾಲೆಯ ಸುತ್ತಾ ಮುತ್ತಾ ಶ್ರಮದಾನ ಕಾರ್ಯವನ್ನು ಮಾಡಲಾಯಿತು. ಕಾರ್ಯಕ್ರಮವನ್ನು ಶ್ರೀ ವಿಕ್ರಾಂತ ಎಂ ಬಿ ಅ.ಶಿಕ್ಷಕರು ಸ್ವಾಗತಿಸಿ ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…